ರಾಜ್ಯ

ಇ-ಕಾಮರ್ಸ್ ಸಂಸ್ಥೆ ಪ್ರತಿನಿಧಿಗಳೇ, ನಿಮಗೆ ಎಲ್ಲಾ ಸಹಕಾರ ನೀಡುತ್ತೇವೆ: ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ 

ಇ-ಕಾಮರ್ಸ್ ಸಂಸ್ಥೆಗಳು ಕೊರೋನಾ ವೈರಸ್ ಭೀತಿಯಿಂದ ಆನ್ ಲೈನ್ ವಹಿವಾಟುಗಳನ್ನು ಸ್ಥಗಿತಗೊಳಿಸಿರುವುದರಿಂದ ಜನತೆಗೆ ಸಮಸ್ಯೆಯುಂಟಾಗಿದ್ದು ಈ ಬಗ್ಗೆ ಸಂಸ್ಥೆಗಳ ಜೊತೆ ಮಾತುಕತೆ ನಡೆಸಿ ಜನತೆಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ,

ಬೆಂಗಳೂರು: ಇ-ಕಾಮರ್ಸ್ ಸಂಸ್ಥೆಗಳು ಕೊರೋನಾ ವೈರಸ್ ಭೀತಿಯಿಂದ ಆನ್ ಲೈನ್ ವಹಿವಾಟುಗಳನ್ನು ಸ್ಥಗಿತಗೊಳಿಸಿರುವುದರಿಂದ ಜನತೆಗೆ ಸಮಸ್ಯೆಯುಂಟಾಗಿದ್ದು ಈ ಬಗ್ಗೆ ಸಂಸ್ಥೆಗಳ ಜೊತೆ ಮಾತುಕತೆ ನಡೆಸಿ ಜನತೆಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ,

ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ನಾನು ಇಂದು ಸಾಯಂಕಾಲ 7 ಗಂಟೆಗೆ ಇ-ಕಾಮರ್ಸ್ ಆಹಾರ, ವೈದ್ಯಕೀಯ, ದಿನಸಿ, ತರಕಾರಿ, ಹಣ್ಣು ಮತ್ತು ಪ್ರಾಣಿಮೂಲ ಉತ್ಪನ್ನಗಳನ್ನು ಒದಗಿಸುವ ಸಂಸ್ಥೆಗಳ ಪ್ರತಿನಿಧಿಗಳನ್ನು ಬರಲು ಹೇಳಿದ್ದೇನೆ. ಅವರ ಜೊತೆ ನನ್ನ ಕಚೇರಿಯಲ್ಲಿ ಮಾತುಕತೆ ನಡೆಸಿ ಜನತೆಗೆ ಅಗತ್ಯ ಸೇವೆ ಒದಗಿಸುವಂತೆ ಕೋರುತ್ತೇನೆ ಎಂದರು.

ಆನ್ ಲೈನ್ ಪೂರೈಕೆ ಸಂಸ್ಥೆಗಳ ಪ್ರತಿನಿಧಿಗಳು ದಯವಿಟ್ಟು ಬನ್ನಿ, ಮಾತುಕತೆ, ಚರ್ಚೆ ಮಾಡೋಣ, ನಮ್ಮ ಕಡೆಯಿಂದ ಎಲ್ಲಾ ರೀತಿಯ ಸಹಕಾರವನ್ನು ನಿಮಗೆ ನೀಡುತ್ತೇವೆ ಎಂದು ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT