ರಾಜ್ಯ

ಓದುಗರ ಆತಂಕವನ್ನು ದೂರ ಮಾಡಿದ ಸಂಪಾದಕರು: ಸಿದ್ದರಾಮಯ್ಯ ಪ್ರಶಂಸೆ

Srinivasamurthy VN

ಬೆಂಗಳೂರು: ಕೊರೊನಾ ವೈರಸ್ ಹುಟ್ಟಿಸಿರುವ ಭೀತಿಯ ಹಿನ್ನೆಲೆಯಲ್ಲಿ ಕನ್ನಡ ಪತ್ರಿಕೆಗಳ ಸಂಪಾದಕರು ಸೇರಿ ಪತ್ರಿಕೆಗಳು ಸುರಕ್ಷಿತವಾಗಿವೆ ಎಂದು ಒಕ್ಕೊರಲಿನ ಭರವಸೆ ನೀಡಿರುವುದು ಸ್ವಾಗತಾರ್ಹ. ಈ ಮೂಲಕ ಓದುಗರ ಮನದಲ್ಲಿದ್ದ ಆತಂಕವನ್ನು ದೂರ ಮಾಡಿರುವುದಕ್ಕೆ  ಅವರನ್ನು ಅಭಿನಂದಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೊರೊನಾ ಸೋಂಕಿನ ಭಯಭೀತ ಸ್ಥಿತಿಯಲ್ಲಿ ದಿಟ್ಟತನದಿಂದ ಕೆಲಸ ಮಾಡುತ್ತಿರುವ ಮಾಧ್ಯಮ ಕ್ಷೇತ್ರದ ವರದಿಗಾರರು,ಕ್ಯಾಮೆರಾಮೆನ್‌ಗಳು ಮುದ್ರಣಾಲಯದ ಕಾರ್ಮಿಕರು,ಚಾಲಕರು,ಪತ್ರಿಕೆಯ ವಿತರಕರೆಲ್ಲರಿಗೂ ಅಭಿನಂದನೆಗಳು. ಮಾಧ್ಯಮ ಕ್ಷೇತ್ರ ಕೂಡಾ ಅಗತ್ಯ ಸೇವೆ ಎಂದು  ಪರಿಗಣಿಸಿ ರಾಜ್ಯಸರ್ಕಾರ ಇವರ ಸುರಕ್ಷತೆಗೆ ಗಮನನೀಡಬೇಕು ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

SCROLL FOR NEXT