ಬೆಂಗಳೂರಿನಲ್ಲಿ ಮೃತಪಟ್ಟ ಕೋವಿಡ್-19 ರೋಗಿಯನ್ನು ಹಾಸಿಗೆಗಳ ಕೊರತೆಯಿಂದಾಗಿ ಆರ್‌ಜಿಐಸಿಡಿಗೆ ಸೇರಿಸಿಕೊಂಡಿರಲಿಲ್ಲ: ಸಚಿವ ಸುಧಾಕರ್ 
ರಾಜ್ಯ

ಬೆಂಗಳೂರಿನಲ್ಲಿ ಮೃತಪಟ್ಟ ಕೋವಿಡ್-19 ರೋಗಿಯನ್ನು ಹಾಸಿಗೆಗಳ ಕೊರತೆಯಿಂದಾಗಿ ಆರ್‌ಜಿಐಸಿಡಿಗೆ ಸೇರಿಸಿಕೊಂಡಿರಲಿಲ್ಲ: ಸಚಿವ ಸುಧಾಕರ್

ಕರ್ನಾಟಕದಲ್ಲಿ ಕೋವಿಡ್ -19 ಗೆ ಬಲಿಯಾದ ಎರಡನೇ ವ್ಯಕ್ತಿಯನ್ನು ಹಾಸಿಗೆಗಳ ಕೊರತೆ ಇದ್ದ ಕಾರಣ ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಚೆಸ್ಟ್ ಡಿಸೀಸಸ್  ಆಸ್ಪತ್ರೆಯಿಂದ ಸ್ಥಳಾಂತರಿಸಲಾಗಿತ್ತು ಎಂದು  ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್,ಹೇಳಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ -19 ಗೆ ಬಲಿಯಾದ ಎರಡನೇ ವ್ಯಕ್ತಿಯನ್ನು ಹಾಸಿಗೆಗಳ ಕೊರತೆ ಇದ್ದ ಕಾರಣ ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಚೆಸ್ಟ್ ಡಿಸೀಸಸ್  ಆಸ್ಪತ್ರೆಯಿಂದ ಸ್ಥಳಾಂತರಿಸಲಾಗಿತ್ತು ಎಂದು  ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್,ಹೇಳಿದ್ದಾರೆ.

"ಅವರು ಹಿರಿಯ ನಾಗರಿಕರಾಗಿದ್ದು ಆಂಧ್ರದಿಂದ ಗೌರಿಬಿದನೂರಿಗೆ ಪ್ರಯಾಣಿಸಿ ನಂತರ ಬೆಂಗಳೂರಿಗೆ ಬಂದಿದ್ದರು. ಮಧ್ಯಪ್ರಾಚ್ಯಕ್ಕೆ ತೆರಳಿ ಮೆಕ್ಕಾ ಮೊದಲಾದ ಸ್ಥಳಗಳ ಸಂದರ್ಶಿಸಿದ್ದ ಅವರನ್ನು ಆರ್‌ಜಿಐಸಿಡಿಯಲ್ಲಿ ಹಾಸಿಗೆಗಳು ತುಂಬಿದ್ದರಿಂದರಾತ್ರಿ 12 ಗಂಟೆಗೆ ಬೌರಿಂಗ್‌ಗೆ ಸ್ಥಳಾಂತರಿಸಲಾಯಿತು ಮತ್ತು ಬೌರಿಂಗ್ ಆಸ್ಪತ್ರೆಯಲ್ಲಿ ಬೆಳಿಗ್ಗೆ 1 ಗಂಟೆಗೆ ನಿಧನರಾದರು " ಸುಧಾಕರ್ ಹೇಳಿದರು.

ಕರ್ನಾಟಕದಲ್ಲಿ ಪ್ರಕರಣಗಳು ಮಹಾರಾಷ್ಟ್ರ ಹಾಗೂ ಕೇರಳದ ಹೋಲಿಕೆ ಮಾಡಿದರೆ ಹೆಚ್ಚಾಗಿಲ್ಲ. ಆದರೆ ರಾಜ್ಯವು ಈಗಾಗಲೇ ಹಾಸಿಗೆಗಳ ಕೊರತೆಯನ್ನು ಎದುರಿಸುತ್ತಿದೆ. ರೋಗಿಯನ್ನು ಆರ್‌ಜಿಐಸಿಡಿಗೆ ಸ್ಥಳಾಂತರಿಸುವ ಮೊದಲು ಹಾಸಿಗೆಗಳ ಲಭ್ಯತೆಯ ಕೊರತೆಯ ಬಗ್ಗೆ ಅಧಿಕಾರಿಗಳಿಗೆ ಏಕೆ ತಿಳಿದಿರಲಿಲ್ಲ ಎಂಬ ಪ್ರಶ್ನೆಯೂ ಈಗ ಹುಟ್ಟಿಕೊಂಡಿದೆ. ಹಾಸಿಗೆಗಳ ಲಭ್ಯತೆಯನ್ನು ದೃಢಪಡಿಸಿ ರೋಗಿಯನ್ನು ನೇರವಾಗಿ ಬೌರಿಂಗ್‌ಗೆ  ಕರೆದೊಯ್ದಿದ್ದರೂ ಕೂಡ ಅವರ ಪ್ರಾಣ ಉಳಿಯವ ಸಾಧ್ಯತೆ ಇತ್ತು.

ಟ್ರೇಸ್, ಟೆಸ್ಟ್ ಮತ್ತು ಟ್ರೀಟ್ ಮೆಂಟ್ ಎಂಬ ಮೂರು "ಟಿ" ಗಳನ್ನು ಕರ್ನಾಟಕ ಅನುಸರಿಸಲಿದೆ ಎಂದು ಸುಧಾಕರ್ ಹೇಳಿದ್ದಾರೆ. 1,25,000 ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಈವರೆವಿಗೆ  ಮನೆಯಲ್ಲಿ ಅಥವಾ ರಾಜ್ಯದ ಸಾಮೂಹಿಕ ಸಂಪರ್ಕತಡೆಯನ್ನು ಕೇಂದ್ರಗಳಲ್ಲಿ ನಿರ್ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT