ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ದಂಪತಿಗಳಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಫೈನಾನ್ಶಿಯರ್ ಅರೆಸ್ಟ್

 ದಂಪತಿಗಳಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ ಆರೋಪದ ಹಿನ್ನೆಲೆಯಲ್ಲಿ ಫೈನಾನ್ಶಿಯರ್ ಒಬ್ಬನನ್ನು ಬೆಂಗಳೂರು ವಿಜಯನಗರ ಪೋಲೀಸರು ಬಂಧಿಸಿದ್ದಾರೆ. ಫೈನಾನ್ಶಿಯರ್ ಪ್ರಕಾಶ್ ಎಂಬಾತನನ್ನು  ಮಂಗಳವಾರ ಬಂಧಿಸಿದ್ದಾರೆ. ಪ್ರಕಾಶ್ ಕಿರುಕುಳ ನೀಡಿದ ಕಾರಣ ದಂಪತಿ ಗಳಾದ  ಧರ್ಮರಾಜ್ (55) ಮತ್ತು ಭಾಗ್ಯ (50) ಐದು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೋಲ

ಬೆಂಗಳೂರು: ದಂಪತಿಗಳಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ ಆರೋಪದ ಹಿನ್ನೆಲೆಯಲ್ಲಿ ಫೈನಾನ್ಶಿಯರ್ ಒಬ್ಬನನ್ನು ಬೆಂಗಳೂರು ವಿಜಯನಗರ ಪೋಲೀಸರು ಬಂಧಿಸಿದ್ದಾರೆ. ಫೈನಾನ್ಶಿಯರ್ ಪ್ರಕಾಶ್ ಎಂಬಾತನನ್ನು  ಮಂಗಳವಾರ ಬಂಧಿಸಿದ್ದಾರೆ. ಪ್ರಕಾಶ್ ಕಿರುಕುಳ ನೀಡಿದ ಕಾರಣ ದಂಪತಿ ಗಳಾದ  ಧರ್ಮರಾಜ್ (55) ಮತ್ತು ಭಾಗ್ಯ (50) ಐದು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೋಲೀಸರು ತಿಳಿಸಿದರು.

ದಂಪತಿಗಳು ಆತ್ಮಹತ್ಯೆಗೆ ಮುನ್ನ ಡೆತ್ ನೋಟ್ ಬರೆದಿದ್ದು ಹೊಸಹಳ್ಳಿ ನಿವಾಸಿ ಪ್ರಕಾಶ್ ಅವರು ಚಿಟ್ ಫಂಡ್ ವ್ಯವಹಾರವನ್ನೂ ನಡೆಸುತ್ತಿದ್ದಾರೆ ಅವರೇ ತಮಗೆ ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದರೆಂದು ಅದರಲ್ಲಿ ಉಲ್ಲೇಖಿಸಲಾಗಿದೆ. ಕಾಟನ್‌ಪೇಟೆಯಲ್ಲಿ  ದಂಪತಿ ಬೇಕರಿ ಹೊಂದಿದ್ದು, ಆಸ್ತಿಯನ್ನು ಜಾಮೀನಿಗೆ ಇರಿಸಿದ ಬಳಿಕ  60 ಲಕ್ಷ ರೂ. ವ್ಯವಹಾರವು ನಷ್ಟವನ್ನು ಅನುಭವಿಸಿದಾಗ, ಧರ್ಮರಾಜ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿರಲಿಲ್ಲ.

ಅತಿಯಾದ ಬಡ್ಡಿದರಗಳನ್ನು ವಿಧಿಸುವ ಮೂಲಕ ಪ್ರಕಾಶ್ ಅವರ ಆಸ್ತಿಯನ್ನು ತನ್ನ ಹೆಸರಿನಲ್ಲಿ ನೋಂದಾಯಿಸಲು ಒತ್ತಾಯಿಸಿದ್ದಾರೆ. ಅದಕ್ಕಾಗಿ ಪ್ರಕಶ್ ತಮ್ಮವರ ಗ್ಯಾಂಗಿನೊಡನೆ  ಬೇಕರಿಯ ಮುಂದೆ ಬಂದು ದಾಂಧಲೆ ಸಹ ಮಾಡಿದ್ದರು.ಇದರಿಂದ ಬೇಸರಗೊಂಡ ದಂಪತಿಗಳು ಆತ್ಮಹತ್ಯೆಗೆ ನಿರ್ಧಾರ ತೆಗೆದುಕೊಂಡರು.

ದಂಪತಿಯ ಪುತ್ರ ದರ್ಶನ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಪ್ರಕಾಶ್‌ನನ್ನು ಬಂಧಿಸಿದ್ದಾರೆ. ಸಧ್ಯ ಆರೋಪಿಯನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT