ಸಾಂದರ್ಭಿಕ ಚಿತ್ರ 
ರಾಜ್ಯ

ಇದೇ ಮೊದಲ ಬಾರಿಗೆ ಪ್ರಸಿದ್ದ ರಾಮನವಮಿ ಸಂಗೀತೋತ್ಸವ ಮುಂದೂಡಿಕೆ

ಆರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಪ್ರಸಿದ್ಧ ರಾಮನವಮಿ ಸಂಗೀತ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಸಂಗೀತ ಕಾರ್ಯಕ್ರಮವನ್ನು ಆಯೋಜಕರು ಮೇ ಮೊದಲ ವಾರಕ್ಕೆ ಮುಂದೂಡಿದ್ದಾರೆ. ಆದರೆ ಕಾರ್ಯಕ್ರಮ ನಡೆಸುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ.

ಬೆಂಗಳೂರು: ಆರಂಭವಾದಾಗಿನಿಂದ ಇದೇ ಮೊದಲ ಬಾರಿಗೆ ಪ್ರಸಿದ್ಧ ರಾಮನವಮಿ ಸಂಗೀತ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಸಂಗೀತ ಕಾರ್ಯಕ್ರಮವನ್ನು ಆಯೋಜಕರು ಮೇ ಮೊದಲ ವಾರಕ್ಕೆ ಮುಂದೂಡಿದ್ದಾರೆ. ಆದರೆ ಕಾರ್ಯಕ್ರಮ ನಡೆಸುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ.

ಗಣೇಶ ಪೂಜೆಗೆ ಸಂಗ್ರಹಿಸಿದ ಹಣ ಉಳಿದ ಪರಿಣಾಮ ಆ ದುಡ್ಡಿನಿಂದ 1939ರಲ್ಲಿ ಶ್ರೀ ನಾರಾಯಣ ರಾವ್ ರಾಮನವಮಿ ಸಂಗೀತೋತ್ಸವ ಪ್ರಾರಂಭಿಸಿದರು, ಆರಂಭದಲ್ಲಿ ಚಾಮರಾಜಪೇಟೆ ರಸ್ತೆ ಬದಿಯಲ್ಲಿ ಪ್ರಾರಂಭಿಸಲಾಯಿತು. ನಂತರ ಅದರ ಜನಪ್ರಿಯತೆ ಹೆಚ್ಚಾದ ಕಾರಣ ಸ್ಥಳ ಬದಲಾಯಿಸಲಾಯಿತು.

ಕಳೆದ ಹಲವು ವರ್ಶಗಳಿಂದ ಚಾಮರಾಜಪೇಟೆಯ ಕೋಟೆ ಮೈದಾನದಲ್ಲಿರುವ ಪ್ರೌಢಶಾಲೆ ಆವರಣದಲ್ಲಿ ಸಂಗೀತ ಕಾರ್ಯಕ್ರಮ ನಡೆಯುತ್ತಾ ಬಂದಿದೆ.ಇಡೀ ಪ್ರಪಂಚವೇ ಕರೋನಾ ವೈರಸ್ ನಿಂದ ಬಳಲುತ್ತಿದೆ ಹೀಗಾಗಿ ನಾವು ಈ ಬಾರಿ ರಾಮನವಮಿ ಸಂಗೀತ ಕಾರ್ಯಕ್ರಮ ಮುಂದೂಡಿದ್ದೇವೆ ಎಂದು ಮ್ಯಾನೆಜಿಂಗ್ ಟ್ಕಸ್ಚಿ  ಎಸ್ ನಾರಾಯಣರಾವ್ ಹೇಳಿದ್ದಾರೆ.

ಏಪ್ರಿಲ್ 2 ರಂದು ರಾಮನವಮಿ ಹಬ್ಬ ಆಚರಣೆ ಇದೆ. ಏಪ್ರಿಲ್ 7 ರವರೆಗೂ ಸಂಗೀತ ಕಾರ್ಯಕ್ರಮವಿತ್ತು. ಆದರೆ ಹಾಡುಗಾರರು ಕಾರ್ಯಕ್ರಮಕ್ಕೆ ಬರಲು ಒಪ್ಪಲಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಎಲ್ಲಾ ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಕಾರ್ಯಕ್ರಮ ನಡೆಸುತ್ತೇವೆ,  ಈ ಬಾರಿ ಲೈವ್ ಸ್ಟ್ರೀಮ್ ಮಾಡಲು ನಿರ್ಧರಿಸಿದ್ದೇವೆ. ಹೀಗಾಗಿ ಜನ ಎಲ್ಲಿಂದ ಬೇಕಾದರೂ ಕಾರ್ಯಕ್ರಮ ವೀಕ್ಷಿಸಬಹುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT