ಸಾಂದರ್ಭಿಕ ಚಿತ್ರ 
ರಾಜ್ಯ

ಕೇರಳ ಮಾದರಿಯಲ್ಲಿ ಆಹಾರ ಧಾನ್ಯ, ಪರಿಹಾರ ನೀಡುವಂತೆ ಸಾಹಿತಿಗಳು, ಚಿಂತಕರಿಂದ ಮುಖ್ಯಮಂತ್ರಿಗೆ ಪತ್ರ

ಕೇರಳ ಮಾದರಿಯಲ್ಲಿ ಆಹಾರ ಧಾನ್ಯ, ಪರಿಹಾರ ನೀಡುವಂತೆ ಸಾಹಿತಿಗಳು ಹಾಗೂ ಚಿಂತಕರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು:ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಎಲ್ಲಾ ಅಸಂಘಟಿತ ಕಾರ್ಮಿಕ ಕುಟುಂಬಗಳಿಗೆ  ಕೇರಳ ಮಾದರಿಯಲ್ಲಿ ಆಹಾರ ಧಾನ್ಯ, ಪರಿಹಾರ ನೀಡುವಂತೆ ಸಾಹಿತಿಗಳು ಹಾಗೂ ಚಿಂತಕರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ಎಲ್ಲಾ  ಅಸಂಘಟಿತ ಕಾರ್ಮಿಕ ಕುಟುಂಬಗಳಿಗೆ ಆಯಾ ಜಿಲ್ಲಾಧಿಕಾರಿಗಳ ಮೂಲಕ ಕೂಡಲೇ ಅವರ  ಬ್ಯಾಂಕ್ ಖಾತೆಗೆ ರೂ 5000 ಹಣ ಜಮಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. 

ಈಗಾಗಲೇ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ  ತಾವು ಮಂಡಳಿಯ ನಿಧಿಯಿಂದ ಮಾಸಿಕ ರೂ. 1000 ನೆರವನ್ನು ಘೋಷಿಸಿರುವುದು ಸ್ವಾಗತಾರ್ಹ,  ಆದರೆ ಅದನ್ನು ಕೂಡಲೇ ರೂ. 3000 ಕ್ಕೆ ಹೆಚ್ಚಿಸಲು ಕ್ರಮವಹಿಸಬೇಕು. ಇತರೆ ಅಸಂಘಟಿತ  ಕಾರ್ಮಿಕರಿಗೂ ಇದೇ ರೀತಿಯ ಆರ್ಥಿಕ ನೆರವು ಸರಕಾರದ ಅನುದಾನದಲ್ಲಿ ಕೂಡಲೇ ಪ್ರಕಟಿಸಬೇಕು ಎಂದು ನಾಡಿನ ಹಿರಿಯ ಸಾಹಿತಿಗಳು, ಬುದ್ಧಿಜೀವಿಗಳು, ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ  ಸಾಹಿತಿಗಳಾದ ಡಾ ಜಿ.ರಾಮಕೃಷ್ಣ (ಜಿ.ಆರ್), ಚಿದಂಬರ್ ರಾವ್ ಜಂಬೆ, ರಹಮತ್ ತರಿಕೆರೆ, ಕಾತ್ಯಾಯಿನಿ ಚಾಮರಾಜ್,ರೇಣುಕಾ ನಿಡುಗುಂದಿ, ಡಿ.ಎಸ್ ಚೌಗಲೆ ಸೇರಿ ಹಲವು ಪ್ರಗತಿಪರರರು, ಹಸಿದ ಹೊಟ್ಟೆಗೆ ಊಟ ಹಾಕುವಂತೆ ಮನವಿ ಮಾಡಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ