ಸಾಂದರ್ಭಿಕ ಚಿತ್ರ 
ರಾಜ್ಯ

ಕೇರಳ ಮಾದರಿಯಲ್ಲಿ ಆಹಾರ ಧಾನ್ಯ, ಪರಿಹಾರ ನೀಡುವಂತೆ ಸಾಹಿತಿಗಳು, ಚಿಂತಕರಿಂದ ಮುಖ್ಯಮಂತ್ರಿಗೆ ಪತ್ರ

ಕೇರಳ ಮಾದರಿಯಲ್ಲಿ ಆಹಾರ ಧಾನ್ಯ, ಪರಿಹಾರ ನೀಡುವಂತೆ ಸಾಹಿತಿಗಳು ಹಾಗೂ ಚಿಂತಕರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ಬೆಂಗಳೂರು:ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಎಲ್ಲಾ ಅಸಂಘಟಿತ ಕಾರ್ಮಿಕ ಕುಟುಂಬಗಳಿಗೆ  ಕೇರಳ ಮಾದರಿಯಲ್ಲಿ ಆಹಾರ ಧಾನ್ಯ, ಪರಿಹಾರ ನೀಡುವಂತೆ ಸಾಹಿತಿಗಳು ಹಾಗೂ ಚಿಂತಕರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ಎಲ್ಲಾ  ಅಸಂಘಟಿತ ಕಾರ್ಮಿಕ ಕುಟುಂಬಗಳಿಗೆ ಆಯಾ ಜಿಲ್ಲಾಧಿಕಾರಿಗಳ ಮೂಲಕ ಕೂಡಲೇ ಅವರ  ಬ್ಯಾಂಕ್ ಖಾತೆಗೆ ರೂ 5000 ಹಣ ಜಮಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. 

ಈಗಾಗಲೇ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ  ತಾವು ಮಂಡಳಿಯ ನಿಧಿಯಿಂದ ಮಾಸಿಕ ರೂ. 1000 ನೆರವನ್ನು ಘೋಷಿಸಿರುವುದು ಸ್ವಾಗತಾರ್ಹ,  ಆದರೆ ಅದನ್ನು ಕೂಡಲೇ ರೂ. 3000 ಕ್ಕೆ ಹೆಚ್ಚಿಸಲು ಕ್ರಮವಹಿಸಬೇಕು. ಇತರೆ ಅಸಂಘಟಿತ  ಕಾರ್ಮಿಕರಿಗೂ ಇದೇ ರೀತಿಯ ಆರ್ಥಿಕ ನೆರವು ಸರಕಾರದ ಅನುದಾನದಲ್ಲಿ ಕೂಡಲೇ ಪ್ರಕಟಿಸಬೇಕು ಎಂದು ನಾಡಿನ ಹಿರಿಯ ಸಾಹಿತಿಗಳು, ಬುದ್ಧಿಜೀವಿಗಳು, ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ  ಸಾಹಿತಿಗಳಾದ ಡಾ ಜಿ.ರಾಮಕೃಷ್ಣ (ಜಿ.ಆರ್), ಚಿದಂಬರ್ ರಾವ್ ಜಂಬೆ, ರಹಮತ್ ತರಿಕೆರೆ, ಕಾತ್ಯಾಯಿನಿ ಚಾಮರಾಜ್,ರೇಣುಕಾ ನಿಡುಗುಂದಿ, ಡಿ.ಎಸ್ ಚೌಗಲೆ ಸೇರಿ ಹಲವು ಪ್ರಗತಿಪರರರು, ಹಸಿದ ಹೊಟ್ಟೆಗೆ ಊಟ ಹಾಕುವಂತೆ ಮನವಿ ಮಾಡಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel