ತೇಜಸ್ವಿ ಸೂರ್ಯ 
ರಾಜ್ಯ

ಜನಸಂದಣಿ ತಡೆಯಲು ಕೆ.ಆರ್​. ಮಾರುಕಟ್ಟೆ ತರಕಾರಿ ಅಂಗಡಿಗಳು ನ್ಯಾಷನಲ್ ಕಾಲೇಜು ಮೈದಾನಕ್ಕೆ ಶಿಫ್ಟ್  ಸಾಧ್ಯತೆ

 ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಜನಜಂಗುಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೊಸ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. 

ಬೆಂಗಳೂರು : ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಜನಜಂಗುಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೊಸ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. 

ತರಕಾರಿ, ಹಣ್ಣುಗಳನ್ನು ಕೊಳ್ಳಲು ಕೆ.ಆರ್​. ಮಾರುಕಟ್ಟೆಗೆ ಜನರು ಮುಗಿಬೀಳುತ್ತಿದ್ದಾರೆ. ಹೀಗಾಗಿ, ಮಾರ್ಕೆಟ್, ಕಲಾಸಿಪಾಳ್ಯದಲ್ಲಿ ಜನಸಂದಣಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕಲಾಸಿಪಾಳ್ಯ ಮತ್ತು ಕೆ.ಆರ್. ಮಾರ್ಕೆಟ್​ನಲ್ಲಿ ಪರಿಶೀಲನೆ ಮಾಡುತ್ತಿದ್ದೇವೆ. ಇಲ್ಲಿ ಬಂದು ಪರಿಶೀಲನೆ ನಡೆಸಿದಾಗ ಬೆಳಗ್ಗೆಯಿಂದ ಹೆಚ್ಚು ಜನ ಬರುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ತರಕಾರಿಗೆ ಚಂದ್ರಾ ಲೇಔಟ್, ವಿಜಯನಗರ, ಬಸವನಗುಡಿ ಕಡೆಯಿಂದ ಜನರು ಬರುತ್ತಿದ್ದಾರೆ. ಪ್ರಧಾನಿ ಮೋದಿ ಲಾಕ್​ಡೌನ್​ಗೆ ಆದೇಶಿಸಿದ್ದರೂ ಜನರು ಕೇಳುತ್ತಿಲ್ಲ. ಈಗ ಪರಿಶೀಲಿಸಿದಾಗ ಪರಿಸ್ಥಿತಿ ಗೊತ್ತಾಗಿದೆ. ಸಚಿವ ಆರ್. ಅಶೋಕ್ ಮತ್ತು ಬಿಬಿಎಂಪಿ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇವೆ. ಮಾರ್ಕೆಟ್ ವ್ಯಾಪಾರವನ್ನು ನಾಳೆಯೇ ಶಿಫ್ಟ್​ ಮಾಡುವ ಬಗ್ಗೆ ಚರ್ಚಿಸುತ್ತೇನೆ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಕೆ.ಆರ್​. ಮಾರ್ಕೆಟ್​ನಲ್ಲಿರುವ ಅಂಗಡಿಗಳನ್ನು ಬಸವನಗುಡಿಯ ನ್ಯಾಷನಲ್ ಮೈದಾನ ಮತ್ತು ವಿಜಯನಗರದ ಮೈದಾನಕ್ಕೆ ಶಿಫ್ಟ್​ ಮಾಡುವ ಬಗ್ಗೆ ಮಾತುಕತೆ ನಡೆಸಲಾಗುವುದು. ಅಲ್ಲಿ ತರಕಾರಿ ಮಾರಾಟಕ್ಕೆ ಅನುವು ಮಾಡಿ, ಅಂತರ ಕಾಯ್ದುಕೊಳ್ಳಲು ಸೂಚನೆ ಕೊಡಲಾಗುತ್ತದೆ. ಇದಕ್ಕೆ ಎರಡು ದಿನ ಸಮಯ ಬೇಕಾಗುತ್ತದೆ. ನಾಳೆಯೇ ಶಿಪ್ಟ್ ಮಾಡುವ ಬಗ್ಗೆ ಮೇಯರ್ ಜೊತೆ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಪ್ರಾಯೋಗಿಕವಾಗಿ ಸಹಾಯವಾಣಿ ತೆರೆಯಲಾಗಿದ್ದು, ತುರ್ತು ಸಂದರ್ಭದಲ್ಲಿ ಔಷಧಿ ತಲುಪಿಸುತ್ತೇವೆ. ಪುಂಡರು ಉಡಾಫೆ ಮಾಡಿಕೊಂಡು ರಸ್ತೆಯಲ್ಲಿ ಓಡಾಡುವುದು ಸರಿಯಲ್ಲ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT