ಬಿಸಿ ಪಾಟೀಲ್ 
ರಾಜ್ಯ

ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಇಲ್ಲ, ಬಿತ್ತನೆ ಬೀಜಕ್ಕಾಗಿ ಪಾಸ್ ಪಡೆಯಿರಿ: ಕೃಷಿ ಸಚಿವ ಬಿ.ಸಿ.ಪಾಟೀಲ್

ಮಹಾಮಾರಿ ಕೊರೋನಾದಿಂದ ಇಡೀ ಜಗತ್ತೇ‌ ತಲ್ಲಣಗೊಂಡಿದ್ದು, ಇಂತಹ ಸಂದರ್ಭದಲ್ಲಿ ಜಗತ್ತಿಗೆ ಅನ್ನವನ್ನು ನೀಡುವ ಅನ್ನದಾತನಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ದಿಟ್ಟ ಕ್ರಮಗಳನ್ನು ಕೈಗೊಂಡಿವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರು: ಮಹಾಮಾರಿ ಕೊರೋನಾದಿಂದ ಇಡೀ ಜಗತ್ತೇ‌ ತಲ್ಲಣಗೊಂಡಿದ್ದು, ಇಂತಹ ಸಂದರ್ಭದಲ್ಲಿ ಜಗತ್ತಿಗೆ ಅನ್ನವನ್ನು ನೀಡುವ ಅನ್ನದಾತನಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ದಿಟ್ಟ ಕ್ರಮಗಳನ್ನು ಕೈಗೊಂಡಿವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ರೈತರು ಬೆಳೆದ ಬೆಳೆಗಳನ್ನು ಕೊಯ್ಲು ಮಾಡಲು, ಮಾರಾಟ ಮಾಡಲು ಯಾವುದೇ ನಿಬಂಧನೆಗಳು ಇರುವುದಿಲ್ಲ. ಮುಂಗಾರು ಪ್ರಾರಂಭವಾದರೆ ರೈತ ಹೊಲದಲ್ಲಿ ಬಿತ್ತನೆ ಮಾಡಲು, ಸರ್ಕಾರ ರೈತನಿಗೆ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಒದಗಿಸಲು ಕ್ರಮಗಳನ್ನು ಕೈಗೊಂಡಿದೆ. ಬೆಳೆಗಳನ್ನು ಸಾಗಾಣಿಕೆ ಮಾಡಲು ಅಗತ್ಯ ವಸ್ತುಗಳ ಕಾಯ್ದೆ ಅಡಿ ತಂದಿದ್ದು, ಈ ಸಂಬಂಧ ರಾಜ್ಯದ ಎಲ್ಲಾ ಕೃಷಿ ನಿರ್ದೇಶಕರು ಹಾಗೂ ಜಂಟಿ ಕೃಷಿ ನಿರ್ದೇಶಕರಿಗೆ ಹಾಗೂ ಎಲ್ಲಾ ಇಲಾಖೆಗಳಿಗೂ ಸುತ್ತೋಲೆ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಯಚೂರು,‌ ಕೊಪ್ಪಳ,‌ ಬಳ್ಳಾರಿ ಹಾಗೂ ಇತರೆ ಭಾಗಗಳಲ್ಲಿ ಭತ್ತ ಬೆಳೆದ ರೈತರು ಅದರ ಕೊಯ್ಲಿಗೆ ಹೊರ ರಾಜ್ಯದಿಂದ ಕೊಯ್ಲು ಯಂತ್ರ ತರಬೇಕಾಗುತ್ತದೆ ಎಂಬ ಆತಂಕದಲ್ಲಿರುವುದು ತಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗಿದ್ದು, ರೈತರು ಯಾವುದೇ ಕಾರಣಕ್ಕೂ ಆತಂಕಕ್ಕೊಳಗಾಗುವುದು ಬೇಡ. ಬಿತ್ತನೆ ಮಾಡಲಾಗಲೀ ಅಥವಾ ಕೊಯ್ಲು ಮಾಡಲಾಗಲಿ ರೈತರಿಗೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ರೈತರು ಯಾವುದೇ ಆತಂಕಕ್ಕೊಳಗಾಗದೇ ತಮ್ಮ ಬಿತ್ತನೆ ಕಾರ್ಯ ಕೃಷಿ ಕಾರ್ಯದಲ್ಲಿ‌ ತೊಡಗಬಹುದು. ರೈತರ ಕೃಷಿ ಚಟುವಟಿಕೆಗಳಿಗೆ ಯಾರೂ ಸಹ ತೊಂದರೆ ಮಾಡಬಾರದು. ಯಂತ್ರೋಪಕರಣ ತಂದು ಕೊಯ್ಲು ಕೃಷಿ ಚಟುವಟಿಕೆ ಮಾಡುವ ಮುನ್ನ ರೈತರು ಅಧಿಕಾರಿಗಳಿಗೆ ಮಾಹಿತಿ ಕೊಡಬೇಕು. ಕೃಷಿ ಚಟುವಟಿಕೆ ಮಾಡುವಾಗ ರೈತರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಬಿತ್ತನೆ ಬೀಜ ಪಡೆಯಲು ಮತ್ತು ಫಸಲು ಸರಬರಾಜು ಮಾಡುವಾಗ ಇಲಾಖಾಧಿಕಾರಿಗಳಿಂದ ಸರಬರಾಜು ಮಾಡುವ ವಾಹನಗಳಿಗೆ ಕೃಷಿಕರು ಪಾಸ್ ಪಡೆಯಬೇಕು ಎಂದು ಬಿ.ಸಿ.ಪಾಟೀಲ್ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ಶ್ವೇತಭವನ ಬಳಿ ಮತ್ತೆ ಗುಂಡಿನ ದಾಳಿ: ಪ್ರತಿದಾಳಿಗೆ ಬಂದೂಕುಧಾರಿ ಸಾವು-Video

ಯುದ್ಧ ಕೊನೆಗೊಳಿಸುವ ಗುರಿ: ಒಪ್ಪಂದಕ್ಕೆ ಸನಿಹದಲ್ಲಿ ಇರಾನ್-ಅಮೆರಿಕ!

Cockroach Janta Party ಬೆಳವಣಿಗೆ ಸಾರ್ವಜನಿಕ ಸಂಕಷ್ಟ ತೋರುತ್ತದೆ: ಪ್ರಶಾಂತ್ ಕಿಶೋರ್

ಆನೇಕಲ್‌ನಲ್ಲಿ ನಿರ್ಮಿಸಲಾಗುತ್ತಿರುವ ನೂತನ ಕ್ರಿಕೆಟ್ ಕ್ರೀಡಾಂಗಣದಿಂದ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ: ಸಿಎಂ ಸಿದ್ದರಾಮಯ್ಯ

ನನ್ನನ್ನು ಕ್ರೂರ ಸರ್ವಾಧಿಕಾರಿ ಅನ್ನಿ, ಆದ್ರೆ 'ಗುಗ್ಗು' ಅಂತ ಮಾತ್ರ ಹೇಳಬೇಡಿ: ಡೊನಾಲ್ಡ್ ಟ್ರಂಪ್

SCROLL FOR NEXT