ಧರ್ಮಸ್ಥಳ ನಂದಾದೀಪ ನಂದಿಹೋದ ವದಂತಿ ಸುಳ್ಳು-ಡಾ. ವೀರೇಂದ್ರ ಹೆಗ್ಗಡೆ ಸ್ಪಷ್ಟನೆ 
ರಾಜ್ಯ

ಧರ್ಮಸ್ಥಳ ನಂದಾದೀಪ ನಂದಿಹೋದ ವದಂತಿ ಸುಳ್ಳು-ಡಾ. ವೀರೇಂದ್ರ ಹೆಗ್ಗಡೆ ಸ್ಪಷ್ಟನೆ

ಧರ್ಮಸ್ಥಳ ಶ್ರೀಮಂಜುನಾಥ ಸ್ವಾಮಿ ದೇವಾಲಯದ ಗರ್ಭಗುಡಿಯಲ್ಲಿ ನಂದಾದೀಪ ಆರಿ ಹೋಗಿದ್ದು ಎಲ್ಲರೂ ತಮ್ಮ ತಮ್ಮ ಮನೆಗಳ ಮುಂದೆ ದೀಪವಿಟ್ಟು ಶ್ರೀದೇವರ ಕೃಪೆಗೆ ಪಾತ್ರರಾಗಬೇಕೆಂದು ಸಾಮಾಜಿಕ ತಾಣಗಳಲ್ಲಿ ವದಂತಿಯೊಂದು ಹರಿದಾಡುತ್ತಿದ್ದು ಈ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸ್ಪಷ್ಟನೆ ನೀಡಿದ್ದಾರೆ.

ಬೆಳ್ತಂಗಡಿ: ಧರ್ಮಸ್ಥಳ ಶ್ರೀಮಂಜುನಾಥ ಸ್ವಾಮಿ ದೇವಾಲಯದ ಗರ್ಭಗುಡಿಯಲ್ಲಿ ನಂದಾದೀಪ ಆರಿ ಹೋಗಿದ್ದು ಎಲ್ಲರೂ ತಮ್ಮ ತಮ್ಮ ಮನೆಗಳ ಮುಂದೆ ದೀಪವಿಟ್ಟು ಶ್ರೀದೇವರ ಕೃಪೆಗೆ ಪಾತ್ರರಾಗಬೇಕೆಂದು ಸಾಮಾಜಿಕ ತಾಣಗಳಲ್ಲಿ ವದಂತಿಯೊಂದು ಹರಿದಾಡುತ್ತಿದ್ದು ಈ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸ್ಪಷ್ಟನೆ ನೀಡಿದ್ದಾರೆ.

ಶಿವಮೊಗ್ಗ, ಶಿಕಾರಿಪುರ, ಭದ್ರಾವತಿ, ಹಾವೇರಿ, ಚನ್ನಗಿರಿ ಸೇರಿ ಅನೇಕ ಭಾಗಗಲ ಜನರ ವಾಟ್ಸ್ ಅಪ್ ಗೆ ನಂದಾದೀಪ ಸಂಬಂಧದ ಸಂದೇಶ ಬಂದಿದ್ದು ರಾತ್ರೋರಾತ್ರಿ ಜನರು ತಮ್ಮ ತಮ್ಮ ಮನೆಗಳನ್ನು ಶುದ್ದೀಕರಿಸಿ ಮನೆ ಮುಂದೆ ದೀಪ ಹಚ್ಚಿದ್ದಾರೆ.

ಈ ಕುರಿತು ಸ್ಪಷ್ಟನೆ ನಿಡಿರುವ ವೀರೇಂದ್ರ ಹೆಗ್ಗಡೆ ಪ್ರತಿದಿನವೂ ದೇವಾಲಯ ರಾತ್ರಿ ಎಂಟಕ್ಕೆ ಬಾಗಿಲು ಮುಚ್ಚಿದರೆ ಮರುದಿನ ಬೆಳಿಗ್ಗೆ ಐದಕ್ಕೆ ತೆರೆಯುತ್ತದೆ.ಈ ನಡುವೆ ದೇವಾಲಯ ಪ್ರವೇಶಕ್ಕೆ ಯಾರೊಬ್ಬರಿಗೂ ಅವಕಾಶವಿಲ್ಲ. ಬೀಗಮುದ್ರೆ ಹಾಕಿದ ಬಳಿಕ ದೇವಾಲಯ ಪ್ರವೇಶಿಸುವವರು ಯಾರು?  ನಂದಾದೀಪ ನಂದಿಹೋಗಿರುವುದನ್ನು ನೋಡಿದ್ದು ಯಾರು? ಇದು ಕ್ಷೇತ್ರದ ಭಕ್ತಾದಿಗಳ ಭಾವನೆ ಹಾಗೂ ನಂಬಿಕೆಯೊಡನೆ ಕೆಲವು ಕಿಡಿಗೇಡಿಗಳು ಮಾಡಿರುವ ಸುಳ್ಳು ವದಂತಿಯಾಗಿದೆ ಎಂದಿದ್ದಾರೆ.

"ಈ ವದಂತಿಯಿಂದ ನೀವೆಲ್ಲರೂ ದೂರವಿದ್ದು ಲೋಕಕ್ಕೆ ಬಂದಿರುವ ಕೊರೋನಾ  ಎಂಬ ಮಹಾಮಾರಿಯನ್ನು ಮನುಜ ಕುಲದಿಂದ ದೂರಮಾಡಲು ಅವರವರ ಮನೆಯೊಳಗೇ ಇದ್ದು ಶ್ರೀ ಮಂಜುನಾಥ ಸ್ವಾಮಿಯನ್ನು ಪ್ರಾರ್ಥಿಸಿಕೊಳ್ಳಿ" ಅವರು ಭಿನ್ನವಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BiggBoss Kannada: ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ, ಮನೆ ಖಾಲಿ ಮಾಡಲು ಬಿಗ್‌ಬಾಸ್‌ ಸ್ಪರ್ಧಿಗಳಿಗೆ 1 ಗಂಟೆ ಗಡುವು!

ತಮ್ಮದೇ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಹರಿಯಾಣ ಎಡಿಜಿಪಿ ಆತ್ಮಹತ್ಯೆ!

CM ಬದಲಾವಣೆ ಹೇಳಿಕೆಗಳಿಗೆ 'ಬ್ರೇಕ್ ಹಾಕಿ': ಕಾಂಗ್ರೆಸ್ ಹೈಕಮಾಂಡ್​​ಗೆ ಹಿರಿಯ ಸಚಿವರ ಆಗ್ರಹ

ಮಾರಣಾಂತಿಕ ದಾಳಿ: ಆಸ್ಪತ್ರೆಗೆ ಭೇಟಿ ನೀಡಿ, ಬಿಜೆಪಿ ಸಂಸದನ ಆರೋಗ್ಯ ವಿಚಾರಿಸಿದ ಮಮತಾ

ಇದು 'ಮೋದಾನಿ-ನಿರ್ಭರ್ ಭಾರತ': ಸರ್ಕಾರದ ಹಳದಿ ಬಟಾಣಿ ಆಮದು ನೀತಿ ಟೀಕಿಸಿದ ಕಾಂಗ್ರೆಸ್

SCROLL FOR NEXT