ರಾಜ್ಯ

ಕೊರೋನಾ ಭೀತಿ: ಮೇಲುಕೋಟೆ ವೈರಮುಡಿ ಉತ್ಸವ ರದ್ದು

Nagaraja AB

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಕೊರೋನಾ ವೈರಸ್ ನ ಯಾವುದೇ ಪ್ರಕರಣ ದಾಖಲಾಗಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಮೇಲುಕೋಟೆಯ ವೈರ ಮುಡಿ ಉತ್ಸವವನ್ನು ರದ್ದುಪಡಿಸಲಾಗಿದೆ

ಒಂದೇ ಕಡೆ ನೂರಕ್ಕೂ ಹೆಚ್ಚು ಜನ ಸೇರದಂತೆ ಸರ್ಕಾರ ಸ್ಪಷ್ವವಾಗಿ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ವೈರ ಮುಡಿ ಉತ್ಸವವನ್ನು ರದ್ದುಪಡಿಸಲು ಜಿಲ್ಲಾಡಳಿತ ತೀರ್ಮಾನ ಕೈಗೊಂಡಿದೆ.

ಈ ಮಧ್ಯೆ ಸುದ್ದಿಗಾರರ ಜತೆಮಾತನಾಡಿದ ಪೌರಾಡಳಿತ ಸಚಿವ ನಾರಾಯಣಗೌಡ, ಈವರೆಗೆ ಜಿಲ್ಲೆಯಲ್ಲಿ ಯಾವುದೇ ಕೊರೋನಾ ಪ್ರಕರಣಗಳು ಕಂಡು ಬಂದಿಲ್ಲ. ಇದು ಒಳ್ಳೆಯ ಬೆಳವಣಿಗೆಯಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಸಮರ್ಪಕವಾಗಿ ನಿಭಾಯಿಸುತ್ತಿರುವ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಅಭಿನಂದಿಸಿದರು.

SCROLL FOR NEXT