ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19 ಮಾಹಿತಿಗಾಗಿ ವೆಬ್ ಸೈಟ್, ಕೂಲಿ ಕಾರ್ಮಿಕರ ಹಸಿವು ಇಂಗಿಸಲು ಸಹಾಯವಾಣಿ ಲೋಕಾರ್ಪಣೆ

ರಾಜ್ಯದಲ್ಲಿ ಕೊರೋನಾ ವೈರಾಣು(ಕೋವಿಡ್-19 ) ಕುರಿತ ಅಧಿಕೃತ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರೂಪಿಸಿರುವ ವೆಬ್ ಸೈಟ್ ಹಾಗೂ ಅನ್ನವಿಲ್ಲದ ಬಡ ಕೂಲಿ ಕಾರ್ಮಿಕರ ಹಸಿವು ಇಂಗಿಸಲು ಕಾರ್ಮಿಕ ಇಲಾಖೆ...

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಾಣು(ಕೋವಿಡ್-19 ) ಕುರಿತ ಅಧಿಕೃತ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರೂಪಿಸಿರುವ ವೆಬ್ ಸೈಟ್ ಹಾಗೂ ಅನ್ನವಿಲ್ಲದ ಬಡ ಕೂಲಿ ಕಾರ್ಮಿಕರ ಹಸಿವು ಇಂಗಿಸಲು ಕಾರ್ಮಿಕ ಇಲಾಖೆ ಸ್ಥಾಪಿಸಿರುವ ಶುಲ್ಕ-ರಹಿತ ದೂರವಾಣಿ ಸೇವೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ನಗರದ ವಾರ್ತಾ ಸೌಧದ ಮಹಾತ್ಮ ಗಾಂಧಿ ಮಾಧ್ಯಮ ಕೇಂದ್ರದಲ್ಲಿ ಶನಿವಾರ ಲೋಕಾರ್ಪಣೆ ಮಾಡಿದರು.

ಅಧಿಕೃತ ವೆಬ್ಸೈಟ್ : https://covid19.karnataka.gov.in/wordpress/ ಗೆ ಚಾಲನೆ ನೀಡಿದರು. ಅಲ್ಲದೆ, ಇದೇ ಸಂದರ್ಭದಲ್ಲಿ ಬಡ ಕೂಲಿ ಕಾರ್ಮಿಕರು ಹಾಗೂ ವಲಸೆ ಬಂದಿರುವ ಕಾರ್ಮಿಕರ ಹಸಿವು ನೀಗಿಸಲು ಕಾರ್ಮಿಕ ಇಲಾಖೆಯ ಸಹಾಯವಾಣಿ : 155214 ಕರೆ ಮಾಡುವ ಮೂಲಕ ಸಚಿವರು ಲೋಕಾರ್ಪಣೆ ಮಾಡಿದರು. 

ವೆಬ್ಸೈಟ್ ವೈಶಿಷ್ಟ್ಯ: ಮುಖ್ಯಮಂತ್ರಿಯವರ ಸಂದೇಶ, ಸಹಾಯವಾಣಿ ಮಾಹಿತಿ, ನಾವು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಕೋವಿಡ್-19 ರ ಗುಣ-ಲಕ್ಷಣಗಳು, 21 ದಿನಗಳ ಲಾಕ್ ಡೌನ್ ವಿವರ, ಸ್ವಯಂಸೇವಕರಾಗಿ ಸೇರಬಯಸುವವರಿಗೆ ಅವಕಾಶ ಹಾಗೂ ಸಾಮಾನ್ಯವಾಗಿ ಕೇಳುವ ಪ್ರಶ್ನೆಗಳಿಗೆ ಉತ್ತರಗಳು, ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತು ಬಲಿಯಾದವರ ಸಂಖ್ಯೆ ಒಳಗೊಂಡಂತೆ ಕೋವಿಡ್-19 ದೃಢಪಟ್ಟಿರುವವರ ಅಂಕಿ-ಸಂಖ್ಯೆ ಕುರಿತ ತಾಜಾ ಮಾಹಿತಿ ಈ ವೆಬ್ ಸೈಟ್ ಲಭ್ಯವಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಅನ್ನವಿಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ಕೂಲಿಕಾರರು ಸಹಾಯವಾಣಿಗೆ ಕರೆ ಮಾಡಿದಲ್ಲಿ ಅವರು ಎಲ್ಲಿಂದ ಕರೆ ಮಾಡಿದ್ದಾರೆ? ಎಂಬುದನ್ನು ದೃಢಪಡಿಸಿಕೊಂಡು ಸಮೀಪದ ಇಂದಿರಾ ಕ್ಯಾಂಟೀನ್ ಅಥವಾ ಸರ್ಕಾರೇತರ ಸಂಘ-ಸಂಸ್ಥೆಗಳ ನೆರವಿನಿಂದ ಅವರು ಇದ್ದಲ್ಲೇ ಊಟದ ವ್ಯವಸ್ಥೆ ಮಾಡಲು ಸಹಾಯವಾಣಿ ನೆರವು ಒದಗಿಸಲಿದೆ. ಅಲ್ಲದೆ, ಬೇರೆ ಊರುಗಳಿಂದ ಬಂದು ನೆಲೆ ಇಲ್ಲದ ಜನರಿಗೆ ನೆಲೆ ಒದಗಿಸುವ ಪ್ರಯತ್ನವನ್ನೂ ಸಹಾಯವಾಣಿ ಮಾಡಲಿದೆ ಎಂದರು.

ಇಡೀ ವಿಶ್ವವನ್ನೇ ಕಾಡುತ್ತಿರುವ ಕೋವಿಡ್-19 ಉಪಟಳ ಅತೀ ಶೀಘ್ರದಲ್ಲೇ ಅಂತ್ಯಗೊಳ್ಳಲಿದೆ. ಮುಂದೆಂದೂ ಮನುಕುಲಕ್ಕೆ ಇಂತಹ ಸಮಸ್ಯೆಗಳು ಕಾಡದಿರಲಿ ಎಂಬ ಶುಭ ಹಾರೈಕೆಯೊಂದಿಗೆ ಈ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜೊತೆಗೆ, ಸಾವು ಇನ್ನಿತರ ಸಂದರ್ಭದಲ್ಲಿ ತಮ್ಮ ಊರಿಗೆ ತೆರಳಬೇಕಾದ ಸಂಕಷ್ಟ ಎದುರಿಸುತ್ತಿರುವ ಕೂಲಿ ಕಾರ್ಮಿಕರಿಗೂ ಸಹಾಯವಾಣಿ ಸಹಾಯಕ್ಕೆ ಬರಲಿದೆ ಎಂದು ಸಚಿವರು ತಿಳಿಸಿದರು.

ಮುಖ್ಯಮಂತ್ರಿಯವರ ಇ-ಗವರ್ನೆನ್ಸ್ ಸಲಹೆಗಾರ ಬೇಳೂರು ಸುದರ್ಶನ, ಕಾರ್ಮಿಕ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಕ್ಯಾಪ್ಟನ್ ಪಿ. ಮಣಿವಣ್ಣನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಅವರೂ ಈ ಸಂದರ್ಭದಲ್ಲಿ ಹಾಜರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT