ಸಾಂದರ್ಭಿಕ ಚಿತ್ರ 
ರಾಜ್ಯ

'ಹೊರಗಡೆ ಬಂದು ಸೀನಿ, ಕೊರೋನಾ ವೈರಸ್ ಹರಡಿ’ 

ಬೆಂಗಳೂರು: ‘ಹೊರಗಡೆ ಬಂದು ಸೀನಿ, ವೈರಸ್ ಹರಡಿ’ ಎಂದು ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದ ಸಾಫ್ಟ್‌ವೇರ್‌ ಎಂಜಿನಿಯರ್ ಮುಜೀಬ್ ಮೊಹಮ್ಮದ್ (34) ಎಂಬಾತನನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ‘ಮಹದೇವಪುರ ಸಮೀಪದ ಎ. ನಾರಾಯಣಪುರದ ಮುಜೀಬ್, ಇನ್ಫೊಸಿಸ್ ಕಂಪನಿಯಲ್ಲಿ ಹಿರಿಯ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ.

ಬೆಂಗಳೂರು: ‘ಹೊರಗಡೆ ಬಂದು ಸೀನಿ, ವೈರಸ್ ಹರಡಿ’ ಎಂದು ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದ ಸಾಫ್ಟ್‌ವೇರ್‌ ಎಂಜಿನಿಯರ್ ಮುಜೀಬ್ ಮೊಹಮ್ಮದ್ (34)
ಎಂಬಾತನನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

‘ಮಹದೇವಪುರ ಸಮೀಪದ ಎ. ನಾರಾಯಣಪುರದ ಮುಜೀಬ್, ಇನ್ಫೊಸಿಸ್ ಕಂಪನಿಯಲ್ಲಿ ಹಿರಿಯ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. ತಿಂಗಳಿಗೆ ₹1.40 ಲಕ್ಷ ಸಂಬಳ ಪಡೆಯುತ್ತಿದ್ದ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಕೊರೊನಾ ವೈರಾಣು ಜನರಲ್ಲಿ ಭೀತಿಯನ್ನುಂಟು ಮಾಡಿದ್ದು, ಇದರ ತಡೆಗೆ ದೇಶವನ್ನೇ ಲಾಕ್‌ಡೌನ್ ಮಾಡಲಾಗಿದೆ. ಇಂಥ ಸಂದರ್ಭದಲ್ಲೇ ಆರೋಪಿ ಜನರನ್ನು ಪ್ರಚೋದಿಸುವ ಪೋಸ್ಟ್‌ ಅನ್ನು ಫೇಸ್‌ಬುಕ್‌ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದಾನೆ’ ಎಂದರು.

‘Spread the word to end the word’ ಎಂದು ತನ್ನ ಫೋಟೊ ಸಮೇತವೇ ಆರೋಪಿ ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್ ಹಾಕಿದ್ದ. ಆ ಬಗ್ಗೆ ಸಾರ್ವಜನಿಕರೊಬ್ಬರು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು, ಕೆಲ ಗಂಟೆಯಲ್ಲೇ  ಆರೋಪಿಯನ್ನು ಬಂಧಿಸಿದ್ದಾರೆ’ ಎಂದು ತಿಳಿಸಿದರು.

‘ಆರೋಪಿ ಕೃತ್ಯದ ಬಗ್ಗೆ ಕಂಪನಿ ಆಡಳಿತ ಮಂಡಳಿಗೂ ಮಾಹಿತಿ ನೀಡಲಾಗಿದೆ. ಲಾಕ್‌ಡೌನ್‌ನಿಂದಾಗಿ ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿತ್ತು. ಮುಜೀಬ್ ಸಹ ಅದೇ ರೀತಿಯಲ್ಲೇ ಮನೆಯಿಂದ ಕೆಲಸ ಮಾಡುತ್ತಿದ್ದ. ಇದೇ ಸಂದರ್ಭದಲ್ಲೇ ಪೋಸ್ಟ್ ಅಪ್‌ಲೋಡ್ ಮಾಡಿದ್ದ’ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT