ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ ರಾಜಕಾರಣಿಗಳು

 ಬೆಂಗಳೂರು: ಕೋವಿಡ್-19 ಸೋಂಕಿತರ ಚಿಕಿತ್ಸಾ ಸೌಕರ್ಯಗಳಿಗೆ ಲವು ರಾಜಕಾರಣಿಗಳು ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ನೀಡಿದ್ದಾರೆ. 

ಬೆಂಗಳೂರು: ಬೆಂಗಳೂರು: ಕೋವಿಡ್-19 ಸೋಂಕಿತರ ಚಿಕಿತ್ಸಾ ಸೌಕರ್ಯಗಳಿಗೆ ಲವು ರಾಜಕಾರಣಿಗಳು ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ನೀಡಿದ್ದಾರೆ. 

ಬೆಂಗಳೂರು ಕೇಂದ್ರ ಕ್ಷೇತ್ರದ ಬಿಜೆಪಿ ಸಂಸದ ‍ಪಿ.ಸಿ. ಮೋಹನ್ ₹2 ಕೋಟಿ ಅನುದಾನ ನೀಡಿದ್ದಾರೆ. ಕೊರೊನಾ ಎದುರಿಸಲು ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ಶ್ಲಾಘಿಸಿರುವ ಮೋಹನ್, ಈಗಾಗಲೇ ರಾಜ್ಯ ಸರ್ಕಾರ 1700 ಹಾಸಿಗೆಗಳನ್ನೊಳಗೊಂಡ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಸಮುಚ್ಚಯವನ್ನು ಕೋವಿಡ್-19 ಸೋಂಕಿತರಿಗಾಗಿ ಪ್ರತ್ಯೇಕವಾಗಿರಿಸಿದ್ದು, ಈ ಆಸ್ಪತ್ರೆ ಸಮುಚ್ಚಯಗಳ ತೀವ್ರ ನಿಗಾ ಘಟಕಗಳಲ್ಲಿ ಅತ್ಯಾವಶ್ಯವಾಗಿರುವ ವೆಂಟಿಲೇಟರ್ ಸೌಲಭ್ಯ, ಎನ್-95 ರೆಸ್ಪಿರೇಟರ್ಸ್ ಮತ್ತು ಸರ್ಜಿಕಲ್ ಮಾಸ್ಕ್ ಸೇರಿದಂತೆ ಪರ್ಸನಲ್ ಪ್ರೊಟೆಕ್ಟೀವ್ ಉಪಕರಣಗಳೇ ಮೊದಲಾದ ಅಗತ್ಯ ಪರಿಕರಗಳನ್ನು ತುರ್ತಾಗಿ ಖರೀದಿಸುವಂತೆ ಸೂಚಿಸಿದರು.

ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ 2,500 ಗ್ಲೋವ್ಸ್, 150 ಕ್ಯಾನ್ ಫ್ಲೋರ್ ಕ್ಲೀನರ್ಸ್,1 ಸಾವಿರ ಕೆಜಿ ಬ್ಲಿಚಿಂಗ್ ಪೌಡರ್ ಅನ್ನು ಖರೀದಿಸಿ ನಗರ ಆಯುಕ್ತರಿಗೆ ಹಸ್ತಾಂತರಿಸಿದ್ದಾರೆ. ಜೇವರ್ಗಿ ಶಾಸಕ ಅಜಯ್ ಸಿಂಗ್ 11 ಸಾವಿರ ಮಾಸ್ಕ್ ಗಳನ್ನು ಪೊಲೀಸರಿಗೆ, ಕಂದಾಯ ಸಿಬ್ಬಂದಿಗೆ ನೀಡಿದ್ದರು, 

ಮಹಾದೇವಪುರ ಶಾಸಕ ಅರವಿಂದ ಲಿಂಬಾವಳಿ ಹಲವರಿಂದ ದೇಣಿಗೆ ಸಂಗ್ರಹಿಸಿ 11 ಸಾವಿರ ಕುಟುಂಬಗಳಿಗೆ5 ಕೆಜಿ ಅಕ್ಕಿ, 1 ಕೆಜಿ ಅಡುಗೆ ಎಣ್ಣೆ, ತೊಗರಿ ಬೇಳೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT