ಮಂಗಳೂರಿನ ರಸ್ತೆಯೊಂದರಲ್ಲಿ ನೀರವ ಮೌನ 
ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ದಿನಸಿ ಪೂರೈಕೆ ಇಲ್ಲ, ಹಾಲು, ಇಂಧನ, ಗ್ಯಾಸ್, ಪತ್ರಿಕೆಗೆ ಸಮಸ್ಯೆಯಿಲ್ಲ!

ದಿನಸಿ, ಹಾಲು ಮತ್ತು ಇತರ ಅಗತ್ಯ ವಸ್ತುಗಳ ಕೊಡು-ಕೊಳ್ಳುವಿಕೆಗೆ ವಿನಾಯ್ತಿ ನೀಡಲಾಗಿದ್ದರೂ ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ದಿನಸಿ ಮತ್ತು ಹಾಲುಗಳ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿತ್ತು. ಅದಕ್ಕೆ ಕಾರಣ ನೆರೆಯ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವುದು.

ಮಂಗಳೂರು:ದಿನಸಿ, ಹಾಲು ಮತ್ತು ಇತರ ಅಗತ್ಯ ವಸ್ತುಗಳ ಕೊಡು-ಕೊಳ್ಳುವಿಕೆಗೆ ವಿನಾಯ್ತಿ ನೀಡಲಾಗಿದ್ದರೂ ಕೂಡ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ದಿನಸಿ ಮತ್ತು ಹಾಲುಗಳ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿತ್ತು. ಅದಕ್ಕೆ ಕಾರಣ ನೆರೆಯ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವುದು.

ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಲನ್ನು ಪೂರೈಸಲಾಗುತ್ತಿದೆ. ಆದರೆ ದಿನಸಿಗಳನ್ನು ಪೂರೈಸಲಾಗುತ್ತಿಲ್ಲ. ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಉನ್ನತ ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂದು ಜಿಲ್ಲೆಯಲ್ಲಿ ಹಾಲಿನ ಪೂರೈಕೆಗೆ ಕೊರತೆಯಾಗುವುದಿಲ್ಲ. ವೈದ್ಯಕೀಯ ಮಳಿಗೆಗಳು, ದಿನಪತ್ರಿಕೆಗಳ ಪೂರೈಕೆ, ಗ್ಯಾಸ್ ಮತ್ತು ಇಂಧನಗಳ ಪೂರೈಕೆಗೆ ಲಾಕ್ ಡೌನ್ ನಿಂದ ಯಾವುದೇ ತೊಂದರೆಯಾಗುವುದಿಲ್ಲ ಎಂದರು.

ಇನ್ನು ಜಿಲ್ಲೆಯಲ್ಲಿ ಮನೆಮನೆಗಳಿಗೆ ದಿನಸಿ ಮತ್ತು ಅಗತ್ಯ ವಸ್ತುಗಳ ಪೂರೈಕೆ ಸಂಬಂಧ 300ಕ್ಕೂ ಹೆಚ್ಚು ವ್ಯಾಪಾರಸ್ಥರ ಜೊತೆ ಸಭೆ ನಡೆಸಿ ನಿರ್ಧಾರಕ್ಕೆ ಬರಲಾಗುವುದು.ಜಿಲ್ಲೆಗೆ ಬರುವ ಮತ್ತು ಜಿಲ್ಲೆಯಿಂದ ಹೊರಹೋಗುವ ಟ್ರಕ್ ಗಳನ್ನು ತಡೆಯುವುದು ಬೇಡ, ಹಾಗೆಂದು ನೆರೆ ರಾಜ್ಯಗಳಿಂದ ಬರುವ ಆಂಬ್ಯುಲೆನ್ಸ್ ಗೆ ಜಿಲ್ಲೆಯ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT