ಸಾಂದರ್ಭಿಕ ಚಿತ್ರ 
ರಾಜ್ಯ

ತುಮಕೂರು ಜನತೆಗೆ ಸದ್ಯಕ್ಕೆ ರಿಲೀಫ್: ವೃದ್ಧನ ಪ್ರಾಥಮಿಕ ಸಂಪರ್ಕದಲ್ಲಿದ್ದ ವ್ಯಕ್ತಿಗಳಲ್ಲಿ ಕರೋನಾ ನೆಗೆಟಿವ್

ತುಮಕೂರಿನಲ್ಲಿ ಕರೋನಾ ಸೋಂಕಿನಿಂದ ಇತ್ತೀಚೆಗೆ ಸಾವನ್ನಪ್ಪಿದ ವೃದ್ಧನ ಪ್ರಾಥಮಿಕ ಸಂಪರ್ಕದಲ್ಲಿದ್ದ ವ್ಯಕ್ತಿಗಳಲ್ಲಿ ಕರೋನಾ ಟೆಸ್ಟ್ ನಲ್ಲಿ ನೆಗೆಟಿವ್ ಕಂಡು ಬಂದಿದೆ ಎಂದು ಬೆಂಗಳೂರಿನ ಐಸಿಎಂಆರ್ ಎನ್ ಐವಿ ಯಲಿಲು ನಡೆದ ಪರೀಕ್ಷೆಯಿಂದ ದೃಢಪಟ್ಟಿದೆ.

ತುಮಕೂರು: ತುಮಕೂರಿನಲ್ಲಿ ಕರೋನಾ ಸೋಂಕಿನಿಂದ ಇತ್ತೀಚೆಗೆ ಸಾವನ್ನಪ್ಪಿದ ವೃದ್ಧನ ಪ್ರಾಥಮಿಕ ಸಂಪರ್ಕದಲ್ಲಿದ್ದ ವ್ಯಕ್ತಿಗಳಲ್ಲಿ ಕರೋನಾ ಟೆಸ್ಟ್ ನಲ್ಲಿ ನೆಗೆಟಿವ್ ಕಂಡು ಬಂದಿದೆ ಎಂದು ಬೆಂಗಳೂರಿನ ಐಸಿಎಂಆರ್ ಎನ್ ಐವಿ ಯಲಿಲು ನಡೆದ ಪರೀಕ್ಷೆಯಿಂದ ದೃಢಪಟ್ಟಿದೆ.

ಈ ವಿಷಯ ಸದ್ಯ ತುಮಕೂರು ನಿವಾಸಿಗಳಲ್ಲಿ ನಿರಾಳ ಮೂಡಿಸಿದೆ.  ತುಮಕೂರಿನ ಶಿರಾಪ್ರದೇಶವನ್ನು ರೆಡ್ ಜೋನ್ ಎಂದು ಗುರುತಿಸಲಾಗಿತ್ತು. 13 ವ್ಯಕ್ತಿಗಳು ಸೋಂಕಿತನ ಜೊತೆ ದೆಹಲಿಗೆ ಪ್ರಯಾಣ ಬೆಳೆಸಿದ್ದರು.ದೆಹಲಿಯ ಜಾಮಿಯಾ ಮಸೀದಿಯಲ್ಲಿ 5ದಿನ ವಾಸ್ತವ್ಯ ಹೂಡಿ ನಂತರ ಮಾರ್ಚ್ 14 ರಂದು ವಾಪಾಸಾಗಿದ್ದರು.

ಆತನ ಜೊತೆ ಪ್ರಯಾಣಿಸಿದ್ದ 10 ಮಂದಿಯನ್ನು ಹೋಮ್ ಕ್ವಾರಂಟೈನ್ ನಲ್ಲಿಡಲಾಗಿತ್ತು, ಅದಾದ ನಂತರ ಅವರಿಗೆ ಪರೀಕ್ಷೆ ಮಾಡಿಸಿದಾಗ ನೆಗೆಟಿವ್ ಬಂದಿದೆ.ಮಂಡ್ಯದ ನಾಗಮಂಗಲದ ಮತ್ತೊಬ್ಬ ವ್ಯಕ್ತಿ ಇನ್ನೂ ಸಿಕ್ಕಿಲ್ಲ.

ಹೋಮ್ ಕ್ವಾರಂಟೈನ್ ನಲ್ಲಿದ್ದ ಸಂತ್ರಸ್ತನ ಕುಟುಂಬಸ್ತರಲ್ಲಿ ಕೂಡ ಟೆಸ್ಟ್ ನೆಗೆಟಿವ್ ಬಂದಿರುವುದು ಸದ್ಯಕ್ಕೆ ಸಮಾಧಾನ ತಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT