ರಾಜ್ಯ

ಸಿಇಟಿ ಪರೀಕ್ಷೆ ಮುಂದೂಡಿಕೆ

Lingaraj Badiger

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 22, 23ರಂದು ನಡೆಸಬೇಕಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಜವಾಬ್ದಾರಿ ಹೊತ್ತಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ ಅವರು ಸೋಮವಾರ ತಿಳಿಸಿದ್ದಾರೆ.

ಕೊವಿಡ್-19 ಕಾರಣಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಇನ್ನೂ ಪೂರ್ಣವಾಗಿಲ್ಲ. ಅಲ್ಲದೆ ಸಹಜ ಸ್ಥಿತಿಯೂ ಇಲ್ಲ. ಹೀಗಾಗಿ ಸಿಇಟಿ ಪರೀಕ್ಷೆ ಮುಂದೂಡಲಾಗಿದೆ. ಏಪ್ರಿಲ್ ಮೂರನೇ ವಾರದಲ್ಲಿ ಸಿಇಟಿ ಪರೀಕ್ಷೆಯ ದಿನಾಂಕವನ್ನು ತಿಳಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ ನಂತರ‌ ಅವರು ಈ ತೀರ್ಮಾನ ಪ್ರಕಟಿಸಿದ್ದಾರೆ.

ಕೊರೋನಾ ವೈರಸ್ ದೇಶದಲ್ಲಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ದಿನೇ ದಿನೇ ಕೊರೊನಾ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ.

SCROLL FOR NEXT