ಸಾಂದರ್ಭಿಕ ಚಿತ್ರ 
ರಾಜ್ಯ

ಬಂಡಿಪುರ ಮೀಸಲು ಅರಣ್ಯದಲ್ಲಿ  ನಾಲ್ವರು ಕಳ್ಳ ಬೇಟೆಗಾರರ ಬಂಧನ 

ಬಂಡೀಪುರ ಮೀಸಲು ಅರಣ್ಯದಲ್ಲಿ ನಾಲ್ವರು ಕಳ್ಳ ಬೇಟೆಗಾರರನ್ನು ಬಂಧಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಅವರ ಬಳಿಯಿದ್ದ ಆಯುಧಗಳನ್ನು ವಶ ಪಡಿಸಿಕೊಂಡಿದ್ದಾರೆ.

ಬೆಂಗಳೂರು: ಬಂಡೀಪುರ ಮೀಸಲು ಅರಣ್ಯದಲ್ಲಿ ನಾಲ್ವರು ಕಳ್ಳ ಬೇಟೆಗಾರರನ್ನು ಬಂಧಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಅವರ ಬಳಿಯಿದ್ದ ಆಯುಧಗಳನ್ನು ವಶ ಪಡಿಸಿಕೊಂಡಿದ್ದಾರೆ.

ಶುಕ್ರವಾರ ನಾನು ಕ್ಯಾಮೆರಾ ಮೂಲಕ ಚಿತ್ರಗಳನ್ನು ಸೆರೆ ಹಿಡಿಯಲು ಹೋಗುತ್ತಿದ್ದೆ, ಈ ವೇಳೆ ಕೆಲವರು ಗನ್ ಹಿಡಿದು ಹೋಗುತ್ತಿರುವುದು ಕಂಡು ಬಂತು,  ನಾನು ಸಮಯಕ್ಕೆ ಸರಿಯಾಗಿ ಸಿಬ್ಬಂದಿ ಜೊತೆ ಆ ಸ್ಥಳಕ್ಕೆ ತಲುಪಿದೆ,ನಾಲ್ವರನ್ನು ಬಂಧಿಸಿದ್ದು ಪರಾರಿಯಾಗಿರುವ ಐದನೇ ವ್ಯಕ್ತಿಗಾಗಿ ಶೋಧ ನಡೆಸುತ್ತಿದ್ದೇವೆ ಎಂದು ಅರಣ್ಯಾಧಿಕಾರಿ ತಿಳಿಸಿದ್ದಾರೆ.

ವೆಂಕಟೇಗೌಡ, ಮಹಾದೇವಪ್ಪ, ಪುಟ್ಟಸ್ವಾಮಿ ನಾಯಕ, ಮತ್ತು ಗಣೇಶನನ್ನು ಬಂಧಿಸಿರುವ ಅಧಿಕಾರಿಗಳು ಅವರನ್ನು ನ್ಯಾಯಾಂಗ ಬಂದನಕ್ಕೆ ನೀಡಿದ್ದಾರೆ, ತಪ್ಪಿಸಿಕೊಂಡಿರುವ ಮತ್ತೊಬ್ಬ ಆರೋಪಿ ಮಾಚಿ ವೆಂಕಟನಿಗಾಗಿ  ಹುಡುಕಾಟ ನಡೆಸುತ್ತಿದ್ದಾರೆ. ಪ್ರಾಣಿಗಳ ಬೇಟೆಗಾಗಿ ಕಾಡಿಗೆ ಬಂದಿದ್ದಾಗಿ ಆರೋಪಿಗಳು  ತಪ್ಪೊಪ್ಪಿಕೊಂಡರುವುದಾಗಿ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.  ಇದೇ ಮೊದಲ ಬಾರಿ ಕಾಡಿಗೆ ಬಂದಿದ್ದಾಗಿ ತಿಳಿಸಿದ್ದಾರೆ.

ಬಂಡಿಪುರ ಅರಣ್ಯ ವಲಯದಲ್ಲಿ ಸಿಕ್ಕಿಕೊಂಡ ಮೊದಲ ಕಳ್ಳ ಬೇಟೆಗಾರರು ಇವರಾಗಿದ್ದಾರೆ,  ಲಾಕ್ ಡೌನ್ ದುರುಪಯೋಗ ಪಡಿಸಿಕೊಂಡ ಆರೋಪಿಗಳು ಕಳ್ಳ ಬೇಟೆಗಾಗಿ ಬಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT