ರಾಜ್ಯ

ಕೊರೋನಾ ಸೋಂಕಿತರ ಜೊತೆ ಸಂಪರ್ಕದಲ್ಲಿದ್ದವರು 14 ದಿನಗಳ ಸರ್ಕಾರದ ನಿರ್ಬಂಧನಕ್ಕೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗಿರುವ ಕೇಂದ್ರಗಳಲ್ಲಿ ಕೊರೋನಾ ಸೋಂಕಿತ ರೋಗಿಗಳ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಕಡ್ಡಾಯವಾಗಿ ನಿರ್ಬಂಧದಲ್ಲಿಡಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗಿರುವ ಕೇಂದ್ರಗಳಲ್ಲಿ ಕೊರೋನಾ ಸೋಂಕಿತ ರೋಗಿಗಳ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಕಡ್ಡಾಯವಾಗಿ ನಿರ್ಬಂಧದಲ್ಲಿಡಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕಡಿಮೆ ಅಪಾಯದಲ್ಲಿರುವ ರೋಗಿಗಳನ್ನು ಸರ್ಕಾರ ಗುರುತಿಸಿರುವ ಸ್ಥಳಗಳಾದ ಹೊಟೇಲ್ ಗಳು, ಗೆಸ್ಟ್ ಹೌಸ್ ಮತ್ತು ಇತರ ಕೇಂದ್ರಗಳಲ್ಲಿ ನಿರ್ಬಂಧನದಲ್ಲಿಡಲಾಗುತ್ತದೆ. ಅಧಿಕ ಅಪಾಯದಲ್ಲಿರುವ ರೋಗಿಗಳೊಂದಿಗೆ ಸಂಪರ್ಕದಲ್ಲಿದ್ದವರನ್ನು 60 ವರ್ಷಕ್ಕಿಂತ ಮೇಲಿನವರು ಡಯಾಬಿಟಿಸ್, ಅಸ್ತಮಾ, ರಕ್ತದೊತ್ತಡ ಇತ್ಯಾದಿ ಆರೋಗ್ಯ ಸಮಸ್ಯೆಯಲ್ಲಿರುವವರನ್ನು ಸರ್ಕಾರದ ನಿರ್ಬಂಧ ಘಟಕಗಳಿಗೆ ಕಳುಹಿಸಲಾಗುತ್ತದೆ. ಅಧಿಕ ಅಪಾಯ ಮತ್ತು ಕಡಿಮೆ ಅಪಾಯದಲ್ಲಿರುವ ರೋಗಿಗಳನ್ನು 14 ದಿನಗಳು ಕಡ್ಡಾಯವಾಗಿ ನಿರ್ಬಂಧದಲ್ಲಿರಿಸಲಾಗುತ್ತದೆ ಎಂದು ಸರ್ಕಾರದ ಆದೇಶ ತಿಳಿಸಿದೆ.

14 ದಿನಗಳ ನಿರ್ಬಂಧ ಮಾರ್ಗಸೂಚಿಯನ್ನು ಹಲವರು ಉಲ್ಲಂಘಿಸುತ್ತಿದ್ದಾರೆ ಎಂದು ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಈ ಹೊಸ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ನಗರದ ಆಯ್ದ ಹೊಟೇಲ್ ಗಳು ಮತ್ತು ಗೆಸ್ಟ್ ಹೌಸ್ ಗಳಲ್ಲಿ 50 ಬೆಡ್ ಗಳಿರುತ್ತವೆ. ಇಲ್ಲಿ ವೈದ್ಯರು, ನರ್ಸ್ ಮತ್ತು ಅರೆ ವೈದ್ಯಕೀಯ ಸೇವಾ ಸಿಬ್ಬಂದಿಯಿರುತ್ತಾರೆ, ಒಂದು ಬೆಡ್ ನಿಂದ ಇನ್ನೊಂದಕ್ಕೆ 6 ಅಡಿ ಅಂತರವಿರುತ್ತದೆ.

ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಆಂಬ್ಯುಲೆನ್ಸ್ ಮೂಲಕ ಕಳುಹಿಸಿ ನಂತರ ಅದನ್ನು ಸ್ವಚ್ಛಗೊಳಿಸಲಾಗುತ್ತದೆ. ವೈದ್ಯರು ಇವರ ಆರೋಗ್ಯ ತಪಾಸಣೆ ಮಾಡಿ ಆರೋಗ್ಯ ಇಲಾಖೆ ಆಯುಕ್ತರಿಗೆ ವರದಿ ಕಳುಹಿಸಬೇಕು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT