ರಾಜ್ಯ

ಕೊರೋನಾ ಸೋಂಕಿತರ ಜೊತೆ ಸಂಪರ್ಕದಲ್ಲಿದ್ದವರು 14 ದಿನಗಳ ಸರ್ಕಾರದ ನಿರ್ಬಂಧನಕ್ಕೆ

ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗಿರುವ ಕೇಂದ್ರಗಳಲ್ಲಿ ಕೊರೋನಾ ಸೋಂಕಿತ ರೋಗಿಗಳ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಕಡ್ಡಾಯವಾಗಿ ನಿರ್ಬಂಧದಲ್ಲಿಡಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗಿರುವ ಕೇಂದ್ರಗಳಲ್ಲಿ ಕೊರೋನಾ ಸೋಂಕಿತ ರೋಗಿಗಳ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಕಡ್ಡಾಯವಾಗಿ ನಿರ್ಬಂಧದಲ್ಲಿಡಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಕಡಿಮೆ ಅಪಾಯದಲ್ಲಿರುವ ರೋಗಿಗಳನ್ನು ಸರ್ಕಾರ ಗುರುತಿಸಿರುವ ಸ್ಥಳಗಳಾದ ಹೊಟೇಲ್ ಗಳು, ಗೆಸ್ಟ್ ಹೌಸ್ ಮತ್ತು ಇತರ ಕೇಂದ್ರಗಳಲ್ಲಿ ನಿರ್ಬಂಧನದಲ್ಲಿಡಲಾಗುತ್ತದೆ. ಅಧಿಕ ಅಪಾಯದಲ್ಲಿರುವ ರೋಗಿಗಳೊಂದಿಗೆ ಸಂಪರ್ಕದಲ್ಲಿದ್ದವರನ್ನು 60 ವರ್ಷಕ್ಕಿಂತ ಮೇಲಿನವರು ಡಯಾಬಿಟಿಸ್, ಅಸ್ತಮಾ, ರಕ್ತದೊತ್ತಡ ಇತ್ಯಾದಿ ಆರೋಗ್ಯ ಸಮಸ್ಯೆಯಲ್ಲಿರುವವರನ್ನು ಸರ್ಕಾರದ ನಿರ್ಬಂಧ ಘಟಕಗಳಿಗೆ ಕಳುಹಿಸಲಾಗುತ್ತದೆ. ಅಧಿಕ ಅಪಾಯ ಮತ್ತು ಕಡಿಮೆ ಅಪಾಯದಲ್ಲಿರುವ ರೋಗಿಗಳನ್ನು 14 ದಿನಗಳು ಕಡ್ಡಾಯವಾಗಿ ನಿರ್ಬಂಧದಲ್ಲಿರಿಸಲಾಗುತ್ತದೆ ಎಂದು ಸರ್ಕಾರದ ಆದೇಶ ತಿಳಿಸಿದೆ.

14 ದಿನಗಳ ನಿರ್ಬಂಧ ಮಾರ್ಗಸೂಚಿಯನ್ನು ಹಲವರು ಉಲ್ಲಂಘಿಸುತ್ತಿದ್ದಾರೆ ಎಂದು ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಈ ಹೊಸ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ನಗರದ ಆಯ್ದ ಹೊಟೇಲ್ ಗಳು ಮತ್ತು ಗೆಸ್ಟ್ ಹೌಸ್ ಗಳಲ್ಲಿ 50 ಬೆಡ್ ಗಳಿರುತ್ತವೆ. ಇಲ್ಲಿ ವೈದ್ಯರು, ನರ್ಸ್ ಮತ್ತು ಅರೆ ವೈದ್ಯಕೀಯ ಸೇವಾ ಸಿಬ್ಬಂದಿಯಿರುತ್ತಾರೆ, ಒಂದು ಬೆಡ್ ನಿಂದ ಇನ್ನೊಂದಕ್ಕೆ 6 ಅಡಿ ಅಂತರವಿರುತ್ತದೆ.

ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಆಂಬ್ಯುಲೆನ್ಸ್ ಮೂಲಕ ಕಳುಹಿಸಿ ನಂತರ ಅದನ್ನು ಸ್ವಚ್ಛಗೊಳಿಸಲಾಗುತ್ತದೆ. ವೈದ್ಯರು ಇವರ ಆರೋಗ್ಯ ತಪಾಸಣೆ ಮಾಡಿ ಆರೋಗ್ಯ ಇಲಾಖೆ ಆಯುಕ್ತರಿಗೆ ವರದಿ ಕಳುಹಿಸಬೇಕು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT