ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಎಫೆಕ್ಟ್: ಮೈಸೂರಿನಲ್ಲಿ ಗಗನಕ್ಕೇರಿದ ತರಕಾರಿ ಬೆಲೆ

ಕೊರೋನಾ ವೈರಸ್ ಭೀತಿಯಿಂದಾಗಿ ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ಅಗತ್ಯ ಪ್ರಮಾಣದಲ್ಲಿ ತರಕಾರಿಗಳು ಮಾರುಕಟ್ಟೆಗೆ ಪೂರೈಕೆಯಾಗುತ್ತಿಲ್ಲ, ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ  ಹಣ್ಣು ತರಕಾರಿಗಳ ಬೆಲೆ  ಗಗನಕ್ಕೇರಿದೆ.

ಮೈಸೂರು: ಕೊರೋನಾ ವೈರಸ್ ಭೀತಿಯಿಂದಾಗಿ ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ಅಗತ್ಯ ಪ್ರಮಾಣದಲ್ಲಿ ತರಕಾರಿಗಳು ಮಾರುಕಟ್ಟೆಗೆ ಪೂರೈಕೆಯಾಗುತ್ತಿಲ್ಲ, ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ  ಹಣ್ಣು ತರಕಾರಿಗಳ ಬೆಲೆ  ಗಗನಕ್ಕೇರಿದೆ.

ಕೃಷಿ ಸೇವೆ ಅತ್ಯವಶ್ಯಕ ಎಂದು ಸರ್ಕಾರ ಹೇಳಿದೆ. ಆದರೆ ವಾಹನಗಳ ಸಂಚಾರ ಇಲ್ಲದ ಕಾರಣ ಮಾರುಕಟ್ಟೆಗ ತರಕಾರಿಗಳನ್ನು ತರುವುದು ದೊಡ್ಡ ಸವಾಲಾಗಿದೆ.  ಹೀಗಾಗಿ ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ.

ಡಿಸೆಂಬರ್ ನಲ್ಲಿ  ಕಣ್ಣೀರು ತರಿಸಿದ್ದ ಈರುಳಿಳಿ ಬೆಲೆ ಜನವರಿಯಲ್ಲಿ ಸ್ವಲ್ಪ ಕಡಿಮೆಯಾಗಿತ್ತು,  ಆದರೆ ಲಾಕ್ ಡಾನ್ ಹಿನ್ನೆಲೆಯಲ್ಲಿ  ಮತ್ತು 45-50 ರೂ ಗೆ ಏರಿಕೆಯಾಗಿದೆ. ಈರುಳ್ಳಿ ಮಹಾರಾಷ್ಟ್ರ ಮತ್ತಿತತರ ಕಡೆಯಿಂದ ಸರಬರಾಜಾಗುತ್ತಿತ್ತು, ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ.

ಜಿಲ್ಲೆ-ಜಿಲ್ಲೆಗ ನಡುವೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರೇ ಹಣ್ಣು ಮತ್ತು ತರಕಾರಿಗಳ ಬೆಲೆ ಏರಿಕೆಯಾಗುವುದಿಲ್ಲ, ಹಣ್ಣು ತರಕಾರಿ ಕೊಂಡೊಯ್ಯುವ ವಾಹನಗಳಿಗೆ ನಿಷೇಧ ಹೇರುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ ಎಂದು ವ್ಯಾಪಾರಸ್ಛರೊಬ್ಬರು ಹೇಳಿದ್ದಾರೆ.

ಬೇರೆ ತರಕಾರಿ ಅಂಗಡಿಗಳಿಗೆ ಹೋಲಿಸಿದರೇ ಸ ರ್ಕಾರಿ ಸ್ವಾಮ್ಯದ ಹಾಪ್ ಕಾಮ್ಸ್ ಗಳಲ್ಲಿ ಅತಿ ಹೆಚ್ಚಿನ ಬೆಲೆ ಇರುತ್ತದೆ ಎಂದು ಗ್ರಾಹಕರು ಅಭಿಪ್ರಾಯ ಪಟ್ಟಿದ್ದಾರೆ,
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT