ಆಯುರ್ವೇದ ತಜ್ಞ ಸಂತೋಷ್ ಗುರೂಜಿ 
ರಾಜ್ಯ

ಮಾರಕ ಕೊರೋನಾ ವೈರಸ್ ಗುಣಪಡಿಸಬಲ್ಲ ಪರಿಣಾಮಕಾರಿ ಔಷಧಿ ಇದೆ, ಉಚಿತವಾಗಿ ನೀಡಲು ಸಿದ್ಧ: ಸಂತೋಷ್ ಗುರೂಜಿ

ವಿಶ್ವದ 190ಕ್ಕೂ ಅಧಿಕ ದೇಶಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ನಮ್ಮಲ್ಲಿ ಪರಿಣಾಮಕಾರಿ ಔಷಧಿ ಇದೆ ಎಂದು ಖ್ಯಾತ ಆಯುರ್ವೇದ ತಜ್ಞ ಸಂತೋಷ್ ಗುರೂಜಿ ಹೇಳಿದ್ದಾರೆ.

ಬೆಂಗಳೂರು: ವಿಶ್ವದ 190ಕ್ಕೂ ಅಧಿಕ ದೇಶಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ನಮ್ಮಲ್ಲಿ ಪರಿಣಾಮಕಾರಿ ಔಷಧಿ ಇದೆ ಎಂದು ಖ್ಯಾತ ಆಯುರ್ವೇದ ತಜ್ಞ ಸಂತೋಷ್ ಗುರೂಜಿ ಹೇಳಿದ್ದಾರೆ.

ಈ ಕುರಿತಂತೆ ವಿಡಿಯೋ ಮೂಲಕ ಹೇಳಿಕೆ ನೀಡಿರುವ ಸಂತೋಷ್ ಗುರೂಜಿ ಅವರು, ಇಡೀ ದೇಶ ಮಾರಕ ಕೊರೋನಾ ವೈರಸ್ ನಿಂದಾಗಿ ತತ್ತರಿಸುತ್ತಿದೆ. ಆದರೆ ಈ ವೈರಸ್ ಗೆ ಭಯ ಪಡುವ ಅಗತ್ಯವಿಲ್ಲ. ಈ ಮಾರಕ ವೈರಸ್ ಗೆ ತಮ್ಮ ಆಶ್ರಮ ಪರಿಣಾಮಕಾರಿ ಔಷಧಿ  ಕಂಡುಹಿಡಿದಿದೆ. ವಾಸ, ತಾಲಿಶ್ಪತ್ರ, ವಂಶಲೋಚನ, ಅಮೃತ ಇತ್ಯಾದಿ ಅತ್ಯಮೂಲ್ಯ ಗಿಡಮೂಲಿಕೆಗಳ ಮಿಶ್ರಣದಿಂದ ತಯಾರಿಸಲಾದ ಆಯುರ್ ಶ್ವಾಸ ಚೂರ್ಣವನ್ನು ತಯಾರಿಸಲಾಗಿದೆ. ಈಗಾಗಲೇ ಕೊರೋನಾ ವೈರಸ್ ಗೆ ವೈದ್ಯರು ಪರಿಣಾಮಕಾರಿ ಔಷಧಿ ನೀಡುತ್ತಿದ್ದು, ಅದರ  ಜೊತೆಗೆ ನಮ್ಮ ಈ ಆಯುರ್ ಶ್ವಾಸ ಚೂರ್ಣವನ್ನು ಔಷಧಿಯಾಗಿ ತೆಗೆದುಕೊಂಡರೆ ಖಂಡಿತಾ ಕೊರೋನಾ ವೈರಸ್ ನಿರ್ಮೂಲನೆಯಾಗುತ್ತದೆ ಎಂದು ಹೇಳಿದ್ದಾರೆ.

ಅಂತೆಯೇ ತಮ್ಮ ಈ ಔಷಧಿಯನ್ನು ನಾವು ಸೋಂಕಿತರಿಗೆ ಉಚಿತವಾಗಿ ನೀಡಲು ಸಿದ್ಧವಿದ್ದು, ಇದಕ್ಕಾಗಿ ಸರ್ಕಾರ ಅವಕಾಶ ಮಾಡಿಕೊಡಬೇಕು ಎಂದು ಸಂತೋಷ್ ಗುರೂಜಿ ಮನವಿ ಮಾಡಿದ್ದಾರೆ. ಇದೇ ವೇಳೆ ತಮಗೆ ಯಾವುದೇ ರೀತಿಯ ಹೆಸರು ಅಥವಾ ಖ್ಯಾತಿ ಬೇಕಿಲ್ಲ.  ಭಾರತದಿಂದ ಈ ಕೊರೋನಾ ಹಿಮ್ಮೆಟಿದರೆ ಸಾಕು. ಅದೇ ನಮ್ಮ ಧ್ಯೇಯ. ನಾನೂ ಕೂಡ ಆಯುರ್ವೇದದಲ್ಲಿ ಸಾಕಷ್ಟು ಅನುಭವ ಪಡೆದಿದ್ದು, ಆ ಅನುಭವದ ಮೂಲಕ ಈ ಔಷಧಿ ತಯಾರಿಸಲಾಗಿದೆ. ಈ ಔಷಧಿಯನ್ನು ಸರ್ಕಾರ ಬೇಕಿದ್ದರೆ ಪರೀಕ್ಷೆ ನಡೆಸಿ ಬಳಿಕವೇ ರೋಗಿಗಳಿಗೆ ನೀಡಲಿ  ಎಂದು ಸಂತೋಷ್ ಗುರೂಜಿ ಮನವಿ ಮಾಡಿದ್ದಾರೆ.

ಭಾರತದಲ್ಲಿ ಕೊರೋನಾ ಸೋಂಕು ಅಪಾಯಕಾರಿ ಮಟ್ಟಕ್ಕೆ ಬೆಳೆದಿಲ್ಲ. ಈಗಲೇ ನಾವು ಇದನ್ನು ಚಿವುಟಿ ಹಾಕಬೇಕಿದೆ. ಅದು ಸಾಧ್ಯ ಕೂಡ. ಹೀಗಾಗಿ ನಮ್ಮ ಔಷಧಿಯನ್ನು ಒಮ್ಮೆ ಪರೀಕ್ಷಿಸಿ ಎಂದು ಸರ್ಕಾರ ಮತ್ತು ಆಯುಷ್ ಇಲಾಖೆಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT