ಸಚಿವ ಶ್ರೀರಾಮುಲು 
ರಾಜ್ಯ

ದೆಹಲಿಯ ಮಸೀದಿಯ ಪಾರ್ಥನೆಯಲ್ಲಿ ಪಾಲ್ಗೊಂಡ ರಾಜ್ಯದ 13 ಜನರಿಗೆ ಕೊರೋನಾ ಇಲ್ಲ: ಶ್ರೀರಾಮುಲು

ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜ್ಯದ 54 ಜನರು ಭಾಗವಹಿಸಿದ್ದರು. ಇವರಲ್ಲಿ 13 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಕೊರೋನಾ ಸೋಂಕು ತಗುಲಿಲ್ಲದಿರುವುದು ದೃಢಪಟ್ಟಿದೆ....

ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ರಾಜ್ಯದ 54 ಜನರು ಭಾಗವಹಿಸಿದ್ದರು. ಇವರಲ್ಲಿ 13 ಜನರನ್ನು ತಪಾಸಣೆಗೊಳಪಡಿಸಲಾಗಿದ್ದು, ಕೊರೋನಾ ಸೋಂಕು ತಗುಲಿಲ್ಲದಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಮಂಗಳವಾರ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದವರ ಸಂಖ್ಯೆ 54 ಎಂಬುದು ಖಚಿತವಾಗಿದೆ. ಇವರು ಬೆಂಗಳೂರು, ಬೀದರ್, ಗುಲ್ಬರ್ಗ, ಬಳ್ಳಾರಿ ಭಾಗದವರು ಎಂದು ತಿಳಿದು ಬಂದಿದೆ. ಈಗಾಗಲೇ 13 ಜನರನ್ನು ಪತ್ತೆ ಹಚ್ಚಿ ಅವರನ್ನು ಕ್ವಾರಂಟೈನ್‌ನಲ್ಲಿಡಲಾಗಿದ್ದು, ಅವರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ನೆಗಟಿವ್ ವರದಿ ಬಂದಿದೆ. ಇದು ಸಮಾಧಾನದ ಸಂಗತಿ. ಉಳಿದವರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ದೆಹಲಿಯ ಮಸೀದಿಯಲ್ಲಿ ಮಾ. 10ರಂದು ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ 24 ಜನರಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಲ್ಲಿ  ತುಮಕೂರಿನ ಶಿರಾದಲ್ಲಿ ಇತ್ತೀಚಿಗೆ ಸೋಂಕಿನಿಂದ ಮೃತಪಟ್ಟ ವ್ಯಕ್ತಿ ಕೂಡ ಸೇರಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT