ರಾಜ್ಯ

ಕೊರೋನಾ: ರೋಗಿಗಳ ನರಳಾಟ ಕಂಡು ಮತ್ತೆ ಸ್ಟೆತೊಸ್ಕೋಪ್ ಹಿಡಿಯಲು ಸಿದ್ಧ ಎಂದ ಕರ್ನಾಟಕದ ಶಾಸಕರು!

Vishwanath S

ಬೆಂಗಳೂರು: ಕೊರೋನಾ ಮಹಾಮಾರಿ ಕರ್ನಾಟಕ ರಾಜ್ಯವನ್ನೇ ಅಳುಗಾಡಿಸುತ್ತಿದ್ದು ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೆ ಇದೆ. ಇನ್ನು ಆಸ್ಪತ್ರೆಗಳಲ್ಲಿ ವೈದ್ಯರ ಅಭಾವ ಸಹ ಕಾಣಿಸಿಕೊಳ್ಳುತ್ತಿದ್ದು ಆ ಹಿನ್ನೆಲೆಯಲ್ಲಿ ಕರ್ನಾಟಕದ ಇಬ್ಬರು ಶಾಸಕರು ಮತ್ತೆ ಸ್ಟೆತೊಸ್ಕೋಪ್ ಹಿಡಿಯಲಿದ್ದಾರೆ. 

ಭಾರತದಲ್ಲಿ ಕೊರೋನಾ ಮೂರನೇ ಹಂತಕ್ಕೆ ತಲುಪುವ ಸಾಧ್ಯತೆಗಳು ಹೆಚ್ಚಾಗಿದ್ದರಿಂದ ಕಾಂಗ್ರೆಸ್ ಶಾಸಕರು ಇದೀಗ ವೈದ್ಯಕೀಯ ಸೇವೆ ಸಲ್ಲಿಸಲು ಮುಂದಾಗಿದ್ದಾರೆ. 

ಮಾಜಿ ಸಿಎಂ ಸಿದ್ದರಾಮಯ್ಯನವರ ಪುತ್ರ ವರುಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಯತೀಂದ್ರ ಅವರು ಸಹ ಸ್ವಯಂಪ್ರೇರಿತರಾಗಿ ಮುಂದೆ ಬಂದಿದ್ದಾರೆ. “ಅಗತ್ಯವಿದ್ದರೆ, ನಾನು ವೈದ್ಯನಾಗಿ ಸೇವೆ ಸಲ್ಲಿಸಲು ಸಿದ್ಧನಿದ್ದೇನೆ” ಎಂದರು. ಮೈಸೂರಿನಲ್ಲಿ ಕೇವಲ 500 ಪರೀಕ್ಷಾ ಕಿಟ್‌ಗಳಿವೆ, ಇವುಗಳನ್ನು COVID-19 ರೋಗಿಗಳೊಂದಿಗೆ ಪ್ರಾಥಮಿಕ ಅಥವಾ ದ್ವಿತೀಯಕ ಸಂಪರ್ಕ ಹೊಂದಿದ ಜನರಿಗೆ ಅಥವಾ ತೀವ್ರವಾದ ಜ್ವರ ತರಹದ ರೋಗಲಕ್ಷಣಗಳಿಗೆ ಬಳಸಲಾಗುತ್ತಿದೆ.

ಇನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಹೋದರ ಸಂಬಂಧಿ ಕುಣಿಗಲ್ ಕ್ಷೇತ್ರದ ಶಾಸಕರಾದ ಡಾ. ರಂಗನಾಥ್ ಅವರು ಸಹ ವೈದ್ಯಕೀಯ ಸೇವೆ ಸಲ್ಲಿಸುವ ತೀರ್ಮಾನ ಕೈಗೊಂಡಿದ್ದಾರೆ. 

SCROLL FOR NEXT