ಸಾಂದರ್ಭಿಕ ಚಿತ್ರ 
ರಾಜ್ಯ

ಬಳ್ಳಾರಿ:ಪಡಿತರ ಫಲಾನುಭವಿಗೆ ವಂಚಿಸಿದ ನ್ಯಾಯಬೆಲೆ ಅಂಗಡಿ ಮಾಲೀಕ ಬಂಧನ

ಪಡಿತರ ನೀಡದೆ ವಂಚಿಸಿದ್ದ ನ್ಯಾಯಬೆಲೆ ಅಂಗಡಿ ಮಾಲೀಕನನ್ನು ಪೊಲೀಸರು ಬಂಧಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.

ಹೊಸಪೇಟೆ: ಪಡಿತರ ನೀಡದೆ ವಂಚಿಸಿದ್ದ ನ್ಯಾಯಬೆಲೆ ಅಂಗಡಿ ಮಾಲೀಕನನ್ನು ಪೊಲೀಸರು ಬಂಧಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.

ಹೊಸಪೇಟೆಯ ಹೊರಕೇರಿ, ಚಿತ್ತವಾಡಗಿಯ ಮೇರಿ ಎಂಬುವವರಿಗೆ ಏಪ್ರಿಲ್ ತಿಂಗಳಲ್ಲಿ ಪಡಿತರ ನೀಡದೆ ನ್ಯಾಯ ಬೆಲೆ ಅಂಗಡಿ ಕ್ರಮ ಸಂ.47ರ ಮಾಲೀಕ ಕೆ.ಪಿ.ಲಿಂಗರಾಜು ವಂಚಿಸಿದ್ದರು.

ಹೊಸಪೇಟೆ ಆಕಾಶವಾಣಿ ಬಡಾವಣೆಯ ಕೆ,ಹುಲಿಗೆಪ್ಪ ಎಂಬುವವರ ಮೊಬೈಲ್ ಬಳಸಿಕೊಂಡು ಮೇರಿ ಅವರ ಅಂತ್ಯೋದಯ ಅನ್ನ ಪಡಿತರ ಚೀಟಿಯ ಓಟಿಪಿ ಪಡೆದು ಕಳೆದ ಏಪ್ರಿಲ್ 20ರಂದು 70 ಕೆಜಿ ಅಕ್ಕಿ ಪಡೆದುಕೊಂಡಿರುವುದು ತನಿಖೆಯಿಂದ ಬಯಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಹೊಸಪೇಟೆ ನಗರ ಪೊಲೀಸರು ಆರೋಪಿ ಲಿಂಗರಾಜುವನ್ನು ಬಂಧಿಸಿ ನ್ಯಾಯಬೆಲೆ ಅಂಗಡಿಯನ್ನು ವಶಕ್ಕೆ ಪಡೆದು ಅಲ್ಲಿನ ಪಡಿತರದಾರರನ್ನು ಬೇರೆ ಅಂಗಡಿಗೆ ವರ್ಗಾಯಿಸಲಾಗಿದೆ.

 ನ್ಯಾಯಬೆಲೆ ಅಂಗಡಿ ಮಾಲೀಕ ಕೆ.ಪಿ.ಲಿಂಗರಾಜ್ ಮತ್ತು ಮೊಬೈಲ್ ಮಾಲೀಕ ಕೆ.ಹುಲಿಗೆಪ್ಪ ವಿರುದ್ದ ಅಗತ್ಯ ವಸ್ತುಗಳ ಕಾಯ್ದೆ ಪ್ರಕಾರ ಹೊಸಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT