ಕೋವಿಡ್-19 ರೋಗಿಗಳ ಚಿತ್ರ 
ರಾಜ್ಯ

ರಾಜ್ಯದಲ್ಲಿ 11 ಹೊಸ ಕೋವಿಡ್-19 ಪ್ರಕರಣ: ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ! 

ರಾಜ್ಯದಲ್ಲಿ ಇಂದು 11 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟಾರೇ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ ಆಗಿದೆ. ಈ ಪೈಕಿ 22 ಮಂದಿ ಮೃತಪಟ್ಟಿದ್ದು, 235 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಇಂದು 11 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟಾರೇ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ ಆಗಿದೆ. ಈ ಪೈಕಿ 22 ಮಂದಿ ಮೃತಪಟ್ಟಿದ್ದು, 235 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಈ ಮಾಹಿತಿ ನೀಡಲಾಗಿದೆ. 

ಮಂಡ್ಯ ಜಿಲ್ಲೆಯಲ್ಲಿ 8, ಬೆಳಗಾವಿ ಜಿಲ್ಲೆಯಲ್ಲಿ 3 ಪ್ರಕರಣಗಳು ಇಂದು ಹೊಸದಾಗಿ ಪತ್ತೆಯಾಗಿವೆ. ಮಂಡ್ಯದ 25 ವರ್ಷದ ಯುವಕ 566ನೇ  ಸೋಂಕಿತನಾಗಿದ್ದು, ಮುಂಬೈ, ಮಹಾರಾಷ್ಟ್ರದ ಪ್ರಯಾಣದ ಹಿನ್ನೆಲೆಯಿದೆ. ಮಂಡ್ಯದ 24 ವರ್ಷದ ಯುವತಿ 567ನೇ ರೋಗಿಯಾಗಿದ್ದು, ಮುಂಬೈ, ಮಹಾರಾಷ್ಟ್ರ ಪ್ರಯಾಣದ ಹಿನ್ನೆಲೆಯಿದೆ. 568 ರೋಗಿ ಕೂಡಾ ಮಂಡ್ಯದ 27 ವರ್ಷದ ಯುವಕನಾಗಿದ್ದು, ಮಂಬೈ, ಮಹಾರಾಷ್ಟ್ರದ ಪ್ರಯಾಣದ ಹಿನ್ನೆಲೆಯಿದೆ.

569ನೇ ರೋಗಿ ಮಂಡ್ಯ ಜಿಲ್ಲೆ ಕೆ. ಆರ್. ಪೇಟೆಯ 30 ವರ್ಷದ ಮಹಿಳೆಯಾಗಿದ್ದಾರೆ. ಇವರು ರೋಗಿಗಳಾದ 566, 567 ಮತ್ತು 568ರೊಂದಿಗೆ ಸಂಪರ್ಕ ಹೊಂದಿರುತ್ತಾರೆ. 570, 571, 572 ಹಾಗೂ 573ನೇ ರೋಗಿಗಳು ಮಂಡ್ಯ ಜಿಲ್ಲೆ ಮಳವಳ್ಳಿವರಾಗಿದ್ದು,  ಇವರೆಲ್ಲರೂ 179ನೇ ರೋಗಿಯೊಂದಿಗೆ ಸಂಪರ್ಕ ಹೊಂದಿದವರಾಗಿದ್ದಾರೆ. 

574, 575 ಮತ್ತು 576ನೇ ರೋಗಿಗಳು ಬೆಳಗಾವಿ ಜಿಲ್ಲೆ ರಾಯಭಾಗದವರಾಗಿದ್ದು, 301ನೇ ರೋಗಿಯೊಂದಿಗೆ ದ್ವಿತೀಯ ಸಂಪರ್ಕ ಹೊಂದಿದವರಾಗಿದ್ದಾರೆ. ಇವರೆಲ್ಲರಿಗೂ ಜಿಲ್ಲಾ ಕೇಂದ್ರದ ನಿಗಧಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ