ಕೋವಿಡ್-19 ರೋಗಿಗಳ ಚಿತ್ರ 
ರಾಜ್ಯ

ರಾಜ್ಯದಲ್ಲಿ 11 ಹೊಸ ಕೋವಿಡ್-19 ಪ್ರಕರಣ: ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ! 

ರಾಜ್ಯದಲ್ಲಿ ಇಂದು 11 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟಾರೇ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ ಆಗಿದೆ. ಈ ಪೈಕಿ 22 ಮಂದಿ ಮೃತಪಟ್ಟಿದ್ದು, 235 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಇಂದು 11 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟಾರೇ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ ಆಗಿದೆ. ಈ ಪೈಕಿ 22 ಮಂದಿ ಮೃತಪಟ್ಟಿದ್ದು, 235 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಈ ಮಾಹಿತಿ ನೀಡಲಾಗಿದೆ. 

ಮಂಡ್ಯ ಜಿಲ್ಲೆಯಲ್ಲಿ 8, ಬೆಳಗಾವಿ ಜಿಲ್ಲೆಯಲ್ಲಿ 3 ಪ್ರಕರಣಗಳು ಇಂದು ಹೊಸದಾಗಿ ಪತ್ತೆಯಾಗಿವೆ. ಮಂಡ್ಯದ 25 ವರ್ಷದ ಯುವಕ 566ನೇ  ಸೋಂಕಿತನಾಗಿದ್ದು, ಮುಂಬೈ, ಮಹಾರಾಷ್ಟ್ರದ ಪ್ರಯಾಣದ ಹಿನ್ನೆಲೆಯಿದೆ. ಮಂಡ್ಯದ 24 ವರ್ಷದ ಯುವತಿ 567ನೇ ರೋಗಿಯಾಗಿದ್ದು, ಮುಂಬೈ, ಮಹಾರಾಷ್ಟ್ರ ಪ್ರಯಾಣದ ಹಿನ್ನೆಲೆಯಿದೆ. 568 ರೋಗಿ ಕೂಡಾ ಮಂಡ್ಯದ 27 ವರ್ಷದ ಯುವಕನಾಗಿದ್ದು, ಮಂಬೈ, ಮಹಾರಾಷ್ಟ್ರದ ಪ್ರಯಾಣದ ಹಿನ್ನೆಲೆಯಿದೆ.

569ನೇ ರೋಗಿ ಮಂಡ್ಯ ಜಿಲ್ಲೆ ಕೆ. ಆರ್. ಪೇಟೆಯ 30 ವರ್ಷದ ಮಹಿಳೆಯಾಗಿದ್ದಾರೆ. ಇವರು ರೋಗಿಗಳಾದ 566, 567 ಮತ್ತು 568ರೊಂದಿಗೆ ಸಂಪರ್ಕ ಹೊಂದಿರುತ್ತಾರೆ. 570, 571, 572 ಹಾಗೂ 573ನೇ ರೋಗಿಗಳು ಮಂಡ್ಯ ಜಿಲ್ಲೆ ಮಳವಳ್ಳಿವರಾಗಿದ್ದು,  ಇವರೆಲ್ಲರೂ 179ನೇ ರೋಗಿಯೊಂದಿಗೆ ಸಂಪರ್ಕ ಹೊಂದಿದವರಾಗಿದ್ದಾರೆ. 

574, 575 ಮತ್ತು 576ನೇ ರೋಗಿಗಳು ಬೆಳಗಾವಿ ಜಿಲ್ಲೆ ರಾಯಭಾಗದವರಾಗಿದ್ದು, 301ನೇ ರೋಗಿಯೊಂದಿಗೆ ದ್ವಿತೀಯ ಸಂಪರ್ಕ ಹೊಂದಿದವರಾಗಿದ್ದಾರೆ. ಇವರೆಲ್ಲರಿಗೂ ಜಿಲ್ಲಾ ಕೇಂದ್ರದ ನಿಗಧಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT