ಎಚ್‌.ಡಿ‌.ಕುಮಾರಸ್ವಾಮಿ 
ರಾಜ್ಯ

ಕೊರೊನಾದಿಂದ ಕಾರ್ಮಿಕ ಬಂಧುಗಳ ಮೊಗದಲ್ಲಿ ನಗೆ ಮಾಸಿದೆ: ಎಚ್‌.ಡಿ‌.ಕುಮಾರಸ್ವಾಮಿ

ಕೊರೋನಾದಂತಹ ಗಂಡಾಂತರಕಾರಿ ಪರಿಸ್ಥಿತಿಯಲ್ಲಿ ಕಾರ್ಮಿಕ ಬಂಧುಗಳ ಮೊಗದಲ್ಲಿ ನಗೆ ಮಾಸಿರುವುದು ವಾಸ್ತವ ಸತ್ಯ. ಕಂಡರಿಯದ ಈ ವಿಪತ್ತಿನ ಕಾಲವನ್ನು ಗೆದ್ದು ಬರುವ ದೃಢಸಂಕಲ್ಪ ಕಾರ್ಮಿಕರಲ್ಲಿ ಮನೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಕೊರೋನಾದಂತಹ ಗಂಡಾಂತರಕಾರಿ ಪರಿಸ್ಥಿತಿಯಲ್ಲಿ ಕಾರ್ಮಿಕ ಬಂಧುಗಳ ಮೊಗದಲ್ಲಿ ನಗೆ ಮಾಸಿರುವುದು ವಾಸ್ತವ ಸತ್ಯ. ಕಂಡರಿಯದ ಈ ವಿಪತ್ತಿನ ಕಾಲವನ್ನು ಗೆದ್ದು ಬರುವ ದೃಢಸಂಕಲ್ಪ ಕಾರ್ಮಿಕರಲ್ಲಿ ಮನೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕಾರ್ಮಿಕರ ದಿನಾಚರಣೆಗೆ ಶುಭಕೋರಿದ ಕುಮಾರಸ್ವಾಮಿ, ಸೋತಿರುವ ದುಡಿಯುವ ಕೈಗಳಿಗೆ ಹೊಸ ಚೈತನ್ಯ ಬರಲಿ. ಒಳ್ಳೆಯ ದಿನಗಳ ನಿರೀಕ್ಷೆಯಲ್ಲಿ ಈ ಬಾರಿಯ ಕಾರ್ಮಿಕ ದಿನಾಚರಣೆ ಎದುರುಗೊಳ್ಳೋಣ. ಕಾರ್ಮಿಕರ ಭವಿಷ್ಯದ ಆತಂಕ ದೂರಾಗಲಿ ಎಂದು ಹಾರೈಸಿದ್ದಾರೆ.

ಇನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಹ ಕಾರ್ಮಿಕರಿಗೆ ಶುಭಕೋರಿದ್ದು, ದಕ್ಷತೆಯಿಂದ ಕೂಡಿದ ಕಾರ್ಮಿಕ ವರ್ಗ ದೇಶದ ಆರ್ಥಿಕತೆಗೆ ಬೆನ್ನೆಲುಬು.‌ ಆದರೆ ಇಂದು ಮಹಾಮಾರಿ ಕೊರೊನಾದಿಂದ ಶ್ರಮಿಕ ವರ್ಗ ದುಡಿಯಲು ಸಾಧ್ಯವಾಗದೇ ಕಂಗಾಲಾಗಿದೆ. ಈ ಸಂಕಷ್ಟ ಬಗೆಹರಿದು ದುಡಿಯುವ ಕೈಗಳಿಗೆ ಮತ್ತೆ ಕೆಲಸ ದೊರೆಯಲಿ ಶ್ರಮಿಕರ ಬದುಕು ಹಸನಾಗಲಿ ಎಂದು ಪ್ರಾರ್ಥಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT