ಎಚ್‌.ಡಿ‌.ಕುಮಾರಸ್ವಾಮಿ 
ರಾಜ್ಯ

ಕೊರೊನಾದಿಂದ ಕಾರ್ಮಿಕ ಬಂಧುಗಳ ಮೊಗದಲ್ಲಿ ನಗೆ ಮಾಸಿದೆ: ಎಚ್‌.ಡಿ‌.ಕುಮಾರಸ್ವಾಮಿ

ಕೊರೋನಾದಂತಹ ಗಂಡಾಂತರಕಾರಿ ಪರಿಸ್ಥಿತಿಯಲ್ಲಿ ಕಾರ್ಮಿಕ ಬಂಧುಗಳ ಮೊಗದಲ್ಲಿ ನಗೆ ಮಾಸಿರುವುದು ವಾಸ್ತವ ಸತ್ಯ. ಕಂಡರಿಯದ ಈ ವಿಪತ್ತಿನ ಕಾಲವನ್ನು ಗೆದ್ದು ಬರುವ ದೃಢಸಂಕಲ್ಪ ಕಾರ್ಮಿಕರಲ್ಲಿ ಮನೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಕೊರೋನಾದಂತಹ ಗಂಡಾಂತರಕಾರಿ ಪರಿಸ್ಥಿತಿಯಲ್ಲಿ ಕಾರ್ಮಿಕ ಬಂಧುಗಳ ಮೊಗದಲ್ಲಿ ನಗೆ ಮಾಸಿರುವುದು ವಾಸ್ತವ ಸತ್ಯ. ಕಂಡರಿಯದ ಈ ವಿಪತ್ತಿನ ಕಾಲವನ್ನು ಗೆದ್ದು ಬರುವ ದೃಢಸಂಕಲ್ಪ ಕಾರ್ಮಿಕರಲ್ಲಿ ಮನೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕಾರ್ಮಿಕರ ದಿನಾಚರಣೆಗೆ ಶುಭಕೋರಿದ ಕುಮಾರಸ್ವಾಮಿ, ಸೋತಿರುವ ದುಡಿಯುವ ಕೈಗಳಿಗೆ ಹೊಸ ಚೈತನ್ಯ ಬರಲಿ. ಒಳ್ಳೆಯ ದಿನಗಳ ನಿರೀಕ್ಷೆಯಲ್ಲಿ ಈ ಬಾರಿಯ ಕಾರ್ಮಿಕ ದಿನಾಚರಣೆ ಎದುರುಗೊಳ್ಳೋಣ. ಕಾರ್ಮಿಕರ ಭವಿಷ್ಯದ ಆತಂಕ ದೂರಾಗಲಿ ಎಂದು ಹಾರೈಸಿದ್ದಾರೆ.

ಇನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಹ ಕಾರ್ಮಿಕರಿಗೆ ಶುಭಕೋರಿದ್ದು, ದಕ್ಷತೆಯಿಂದ ಕೂಡಿದ ಕಾರ್ಮಿಕ ವರ್ಗ ದೇಶದ ಆರ್ಥಿಕತೆಗೆ ಬೆನ್ನೆಲುಬು.‌ ಆದರೆ ಇಂದು ಮಹಾಮಾರಿ ಕೊರೊನಾದಿಂದ ಶ್ರಮಿಕ ವರ್ಗ ದುಡಿಯಲು ಸಾಧ್ಯವಾಗದೇ ಕಂಗಾಲಾಗಿದೆ. ಈ ಸಂಕಷ್ಟ ಬಗೆಹರಿದು ದುಡಿಯುವ ಕೈಗಳಿಗೆ ಮತ್ತೆ ಕೆಲಸ ದೊರೆಯಲಿ ಶ್ರಮಿಕರ ಬದುಕು ಹಸನಾಗಲಿ ಎಂದು ಪ್ರಾರ್ಥಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT