ಮೈಸೂರು ಮೃಗಾಲಯ 
ರಾಜ್ಯ

ಮೈಸೂರು ಮೃಗಾಲಯ ನಿರ್ವಹಣೆಗೆ ಅಮೆರಿಕದಿಂದ ಬಂತು ದೇಣಿಗೆ: ಸಚಿವರ ಮನವಿಗೆ ಸ್ಪಂದನೆ

ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯ ನಿರ್ವಹಣೆಗೋಸ್ಕರ ನಾಗರಿಕರು ದೇಣಿಗೆ ನೀಡಿ ಸಹಕರಿಸುವಂತೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ವಾಟ್ಸಪ್ ಮೂಲಕ ಮಾಡಿದ ಮನವಿಗೆ ಸ್ಪಂದಿಸಿದ್ದರು.

ಮೈಸೂರು: ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯ ನಿರ್ವಹಣೆಗೋಸ್ಕರ ನಾಗರಿಕರು ದೇಣಿಗೆ ನೀಡಿ ಸಹಕರಿಸುವಂತೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ವಾಟ್ಸಪ್ ಮೂಲಕ ಮಾಡಿದ ಮನವಿಗೆ ಸ್ಪಂದಿಸಿದ ಅಮೆರಿಕದ ಫೀನಿಕ್ಸ್ ನ ಜ್ಯೋತಿ ವಿಕಾಸ್ ಎಂಬುವರು ತಮ್ಮ ಮಗಳ ಹೆಸರಿನಲ್ಲಿ 25,000 ರೂಪಾಯಿ ದೇಣಿಗೆ ನೀಡಿದ್ದಾರೆ.

ಸಚಿವರ ವಾಟ್ಸಪ್ ಸಂದೇಶದ ಬಗ್ಗೆ ಮಾಧ್ಯಮಗಳಲ್ಲಿ ಗಮನಿಸಿದ ಅವರು, ಪ್ರಾಣಿ-ಪಕ್ಷಿಗಳ ನಿರ್ವಹಣೆಗೋಸ್ಕರ ತಮ್ಮದೂ ಒಂದು ಕೊಡುಗೆ ಇರಬೇಕು ಎಂದು ಅನ್ನಿಸಿ ತಕ್ಷಣ ತಮ್ಮ ಪುತ್ರಿ ಪ್ರಿಶಾ ಹೆಸರಿನಲ್ಲಿ 25,000 ರೂಪಾಯಿ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. 

ಪ್ರಿಶಾ ನಮ್ಮ ಒಂದು ವರ್ಷದ ಮಗಳಾಗಿದ್ದು, ಆಕೆಯ ಹೆಸರಿನಲ್ಲಿ 2 ತಿಂಗಳ ಅವಧಿಗೆ ಆನೆಯೊಂದನ್ನು ದತ್ತು ತೆಗೆದುಕೊಂಡಿದ್ದೇವೆ. ಸಚಿವರು ಮಾಡಿದ ಮನವಿಯನ್ನು ಮಾಧ್ಯಮಗಳ ಮೂಲಕ ಗಮನಿಸಿ ದತ್ತು ತೆಗೆದುಕೊಳ್ಳುವ ನಿರ್ಧಾರ ಮಾಡಿದೆವು. ಜೊತೆಗೆ ಇಲ್ಲಿನ ದಾನಿಗಳಿಂದ ಪ್ರಾಣಿಗಳಿಗೆ ಸಹಾಯಧನವನ್ನು ಸಂಗ್ರಹಿಸಲು ನಮ್ಮ ಬಳಗ ನಿರ್ಧರಿಸಿದೆ ಎಂದು ಅಮೆರಿಕದ ಫೀನಿಕ್ಸ್ ನಗರದಲ್ಲಿರುವ ಜ್ಯೋತಿ ವಿಕಾಸ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT