ಕೆಎಸ್ ಆರ್ ಟಿಸಿ (ಸಂಗ್ರಹ ಚಿತ್ರ) 
ರಾಜ್ಯ

ಕಾರ್ಮಿಕರನ್ನು ಕರೆದೊಯ್ಯಲು ಸೋಮವಾರ ಮತ್ತೆ 500 ಕೆಎಸ್ಆರ್ ಟಿಸಿ ಬಸ್ ಗಳು ಸಜ್ಜು

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಇರುವ ವಲಸೆ ಕಾರ್ಮಿಕರು ಮತ್ತು ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ತಲುಪಿಸಲು ಭಾನುವಾರ 500 ಕೆಎಸ್ ಆರ್ ಟಿಸಿ ಬಸ್ ಗಳು ಸಂಚರಿಸಿದ್ದು, ಸೋಮವಾರ ಮತ್ತೆ 500 ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಇರುವ ವಲಸೆ ಕಾರ್ಮಿಕರು ಮತ್ತು ಕಾರ್ಮಿಕರನ್ನು ತಮ್ಮ ತಮ್ಮ ಊರುಗಳಿಗೆ ತಲುಪಿಸಲು ಭಾನುವಾರ 500 ಕೆಎಸ್ ಆರ್ ಟಿಸಿ ಬಸ್ ಗಳು ಸಂಚರಿಸಿದ್ದು, ಸೋಮವಾರ ಮತ್ತೆ 500 ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸಂಚರಿಸುವಾಗ ಪ್ರತಿಯೊಬ್ಬರ ಹೆಸರು, ಮೊಬೈಲ್ ಸಂಖ್ಯೆಯನ್ನು ಪಡೆದು, ಪ್ರತಿಯೊಬ್ಬರ ಆರೋಗ್ಯವನ್ನು ತಪಾಸಣೆ ಮಾಡಿದ ನಂತರವೇ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಇದನ್ನು ಇನ್ನು ಎರಡು ದಿನಗಳ ಕಾಲ ವಿಸ್ತರಿಸಲಾಗುವುದು ಎಂದು ಕೆಎಸ್ಆರ್ ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಮೆಜೆಸ್ಟಿಕ್ ನಿಂದ ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಯಾದಗಿರಿ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಬಸ್ ಸಂಚರಿಸಿದವು.

ಕೆಂಪೇಗೌಡ ಬಸ್ ನಿಲ್ದಾಣದ ಟರ್ಮಿನಲ್ 1ರಿಂದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಮಂಗಳೂರು, ಮಡಿಕೇರಿ, ಉಡುಪಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆಗೆ ಬಸ್ ಕಾರ್ಯಾಚರಣೆಗೆ ವ್ಯವಸ್ಥೆ ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT