ನಿಸಾರ್ ಅಹಮದ್, ಆರ್. ಅಶೋಕ 
ರಾಜ್ಯ

ಸಕಲ ಸರ್ಕಾರಿ ಗೌರವಗಳೊಂದಿಗೆ ನಿಸಾರ್ ಪಾರ್ಥಿವ ಶರೀರದ ಅಂತ್ಯಸಂಸ್ಕಾರ- ಆರ್.ಅಶೋಕ್

ಇಂದು ನಿಧನರಾಗಿರುವ ಹಿರಿಯ ಸಾಹಿತಿ, ಕವಿ ಪ್ರೊ.ಕೆ.ಎಸ್‌. ನಿಸಾರ್ ಅಹ್ಮದ್ ಅವರ ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಬೆಂಗಳೂರು:ಇಂದು ನಿಧನರಾಗಿರುವ ಹಿರಿಯ ಸಾಹಿತಿ, ಕವಿ ಪ್ರೊ.ಕೆ.ಎಸ್‌. ನಿಸಾರ್ ಅಹ್ಮದ್ ಅವರ ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಸಾರ್ ಅಹ್ಮದ್ ಅವರ ನಿಧನದಿಂದ ಕನ್ನಡದ ಮೇರು ಕವಿಯನ್ನು ನಾವು ಕಳೆದುಕೊಂಡಿದ್ದೇವೆ. ಸಾಹಿತ್ಯ‌ಲೋಕದಲ್ಲಿ ತನ್ನದೆ ಆದ ರೀತಿಯಲ್ಲಿ ಅವರು ಸೇವೆ ಸಲ್ಲಿಸಿದ್ದರು. ಅನೇಕ ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿಗಳಿಗೂ ಅವರು ಭಾಜನರಾಗಿದ್ದರು. ಅವರ ನಿಧನದಿಂದ ಕನ್ನಡ ನಾಡಿಗೆ, ಭಾಷೆಗೆ ದೊಡ್ಡ ಆಘಾತವಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ನಿಸಾರ್ ಅವರು ಬಹಳ‌ ವರ್ಷಗಳಿಂದ ಖಾಯಿಲೆಯಿಂದ ಬಳಲುತ್ತಿದ್ದರು.ನಿಸಾರ್ ಅಹ್ಮದ್ ಅವರ ಹೆಸರಿನಲ್ಲಿ ಟ್ರಸ್ಟ್ ವೊಂದನ್ನು ರಚಿಸಿ ಚಿಕ್ಕಬಳ್ಳಾಪುರ ಬಳಿ 2.20 ಎಕರೆ ಜಮೀನು ನೀಡಲಾಗಿದೆ. ಮುಂದಿನ ಕ್ಯಾಬಿನೆಟ್ ನಲ್ಲಿ ಘೋಷಣೆ ಆಗಬೇಕಿತ್ತು. ಅಷ್ಟರದಲ್ಲಿ ಅವರು ನಮ್ಮನ್ನು ಅಗಲಿದ್ದಾರೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಅಶೋಕ ಕಂಬನಿ ಮಿಡಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು, ಭಾರತದಿಂದ ನೆರವು

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video