ಸಾಂದರ್ಭಿಕ ಚಿತ್ರ 
ರಾಜ್ಯ

ಐಎಎಫ್ ನೌಕಾದಳ ಮುಖ್ಯಸ್ಥನ ಮೇಲೆ ಹಲ್ಲೆ: ಮೂವರ ಬಂಧನ

ಕ್ಷುಲ್ಲಕ ಕಾರಣಕ್ಕಾಗಿ ಐಎಎಫ್ ನೌಕಾದಳ ಮುಖ್ಯಸ್ಥನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲೂರು ಪೊಲಿಸರು ಮೂವರನ್ನು ಬಂಧಿಸಿದ್ದಾರೆ, ಏಪ್ರಿಲ್ 29 ರಂದು ನಡೆದ ಘಟನೆ ಹಿನ್ನೆಲೆಯಲ್ಲಿ  ದ್ವಾರಕಾನಗರ ನಿವಾಸಿ ಅಮೋದ್ ಸಂಜಯ್ ಎಂಬ ಅಧಿಕಾರಿ ದೂರು ದಾಖಲಿಸಿದ್ದರು

ಬೆಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ಐಎಎಫ್ ನೌಕಾದಳ ಮುಖ್ಯಸ್ಥನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲೂರು ಪೊಲಿಸರು ಮೂವರನ್ನು ಬಂಧಿಸಿದ್ದಾರೆ,

ಏಪ್ರಿಲ್ 29 ರಂದು ನಡೆದ ಘಟನೆ ಹಿನ್ನೆಲೆಯಲ್ಲಿ  ದ್ವಾರಕಾನಗರ ನಿವಾಸಿ ಅಮೋದ್ ಸಂಜಯ್ ಎಂಬ ಅಧಿಕಾರಿ ದೂರು ದಾಖಲಿಸಿದ್ದರು.

ದೂರಿನ ಆಧಾರದ ಮೇಲೆ ಪೊಲೀಸರು ಖಾಸಗಿ ಕಂಪನಿ ಎಂಡಿ ಸೇರಿದಂತೆ ಮೂವರನ್ನು ಬಂದಿಸಿದ್ದಾರೆ. ಪತ್ನಿಯೊಂದಿಗೆ ಹತ್ತಿರದ ಅಂಗಡಿಯೊಂದಕ್ಕೆ ದೂರುದಾರ ಅಧಿಕಾರಿ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಪಾರ್ಟ್ ಮೆಂಟ್ ಮುಂಭಾಗ ಸಡನ್ ಆಗಿ ದ್ವಿಚಕ್ರ ವಾಹನ ಬಂದ ಕಾರಣ ಬ್ರೇಕ್ ಹಾಕಲಾಯಿತು. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ, ಅಲ್ಲಿಂದ ಹೋದ ಬೈಕ್ ಸವಾರ ಮತ್ತೆ ಇಬ್ಬರೊಂದಿಗೆ ವಾಪಸ್ ಬಂದು ಅಮೋದ್ ಅವರ ಕಾರಿನ ಕೀ ಕಸಿದು ಕೊಂಡಿದ್ದಾರೆ.

ಸುಮಾರು 15 ರಿಂದ 20 ನಿಮಿಷದವರೆಗೆ ಅಮೋದ್ ಅವರನ್ನು ಬೈಯ್ದು ಅವರ ಮೇಲೆ ಹಲ್ಲೆ ನಡೆಸಿದ್ದಾಗಗಿ ದೂರಿನಲ್ಲಿ ತಿಳಿಸಲಾಗಿದೆ. ಜೊತೆಗೆ ಕಾರಿನ ಬಂಪರ್ ಗೂ ಹಾನಿ ಮಾಡಿದ್ದಾರೆ ಎಂದು ದೂರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT