ಮಹಿಳೆಯರ ಪ್ರತಿಭಟನೆ 
ರಾಜ್ಯ

ಕೊಪ್ಪಳ: ಮದ್ಯದ ಅಂಗಡಿ ಓಪನ್; ಮಹಿಳೆಯರ ಪ್ರತಿಭಟನೆ

40 ದಿನಗಳ ಬಳಿಕ ಮದ್ಯದಂಗಡಿ ತೆರೆಯಲಾಗಿದೆ ಎಂದು ಮದ್ಯ ಪ್ರಿಯರು ಖುಷಿ ಪಡುತ್ತಿದ್ದರೆ ಅತ್ತ ಕೊಪ್ಪಳದಲ್ಲಿ ಮಹಿಳಾ ಮಣಿಗಳು ತೆರೆದಿರುವ ಬಾರ್ ಗಳನ್ನು ಕೂಡಲೇ ಮುಚ್ಚಬೇಕು ಎಂದು ಪ್ರತಿಭಟನೆ ನಡೆಸಿದ್ದಾರೆ.

ಕೊಪ್ಪಳ: 40 ದಿನಗಳ ಬಳಿಕ ಮದ್ಯದಂಗಡಿ ತೆರೆಯಲಾಗಿದೆ ಎಂದು ಮದ್ಯ ಪ್ರಿಯರು ಖುಷಿ ಪಡುತ್ತಿದ್ದರೆ ಅತ್ತ ಕೊಪ್ಪಳದಲ್ಲಿ ಮಹಿಳಾ ಮಣಿಗಳು ತೆರೆದಿರುವ ಬಾರ್ ಗಳನ್ನು ಕೂಡಲೇ ಮುಚ್ಚಬೇಕು ಎಂದು ಪ್ರತಿಭಟನೆ ನಡೆಸಿದ್ದಾರೆ.

ಹೌದು.. ಕೊಪ್ಪಳದ ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಎಂ ಎಸ್ ಐ ಎಲ್ ಅಂಗಡಿ ಎದುರು ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದು, ಅಂಗಡಿ ತೆರೆಯದಂತೆ ವಿರೋಧ ವ್ಯಕ್ತಪಡಿಸಿದ್ದಾರೆ.

ಇಲ್ಲಿ‌ನ ಮದ್ಯದ ಅಂಗಡಿಯಿಂದ ಮಹಿಳೆಯರು ಓಡಾಡಲು ಆಗುತ್ತಿಲ್ಲ. ಕುಡುಕರು ಹಾವಳಿ ಹೆಚ್ಚಾಗಿದ್ದು, ಕುಡಿದು ಕುಡುಕರು ಕೂಗಾಡುತ್ತಾರೆ ಕೆಟ್ಟ ಪದಗಳ ಬಳಕೆ ಮಾಡ್ತಾರೆ. ಇದರಿಂದ ಮಹಿಳೆಯರಿಗೆ ಸಮಸ್ಯೆಯಾಗುತ್ತಿದೆ ಎಂದು ಪ್ರತಿಭಟನಾ ನಿರತ ಮಹಿಳೆಯರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮಹಿಳೆಯೊಬ್ಬರು, ನಮಗೆ ವಯಸ್ಸಿಗೆ ಬಂದ ಹೆಣ್ಣು ಮಕ್ಕಳಿದ್ದಾರೆ. ಕಾಲೇಜಿಗೆ ನಮ್ಮ ಮಕ್ಕಳು ಹೋಗುತ್ತಾರೆ.  ಈ ಮದ್ಯದ ಅಂಗಡಿಯಿಂದಾಗಿ ಇಲ್ಲಿಗೆ ಬಂದು ಕುಡಿಯುವ ಗಂಡಸರು ಹೆಣ್ಣು ಮಕ್ಕಳಿಗೆ ತೊಂದರೆ ಮಾಡುತ್ತಾರೆ. ಲಾಕ್ ಡೌನ್ ಹಿನ್ನಲೆಯಲ್ಲಿ ಈ ಅಂಗಡಿ ಬಂದ್ ಆಗಿದ್ದರಿಂದ ಎರಡು ತಿಂಗಳಿಂದ ಇಲ್ಲಿನ ಮಹಿಳೆಯರು ನೆಮ್ಮದಿಯಿಂದ ಇದ್ದರು. ಆದರೆ ಈಗ ಮತ್ತೆ ಅಂಗಡಿ ತೆರೆಯಲು ಸರ್ಕಾರ ಅನಮತಿ ನೀಡಿದೆ. ಕೂಡಲೇ ಈ ಅಂಗಡಿಯನ್ನು ಸ್ಥಳಾಂತರಿಸಲು ಮನವಿ ಮಾಡಿದ್ದೇವೆ. ಈ ಸಂಬಂಧ ಈಗಾಗಲೇ ಸರ್ಕಾರಕ್ಕೆ ಮನವಿ  ಕೊಟ್ಟಿದ್ದೇವೆ. ಈಗ ಅಂಗಡಿ ತೆಗೆಯೋದು ಬೇಡ ಎಂದು ಮನವಿ ಮಾಡಿಕೊಂಡಿದ್ದಾರೆ.

ಇನ್ನು ಮಹಿಳೆಯರ ಪ್ರತಿಭಟನೆಗೆ ಬೆದರಿದ ಅಂಗಡಿ ಮಾಲೀಕ ಹಾಗೂ ಕುಡುಕರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT