ಸಂಗ್ರಹ ಚಿತ್ರ 
ರಾಜ್ಯ

ವಿಜಯಪುರದಲ್ಲಿ ಕೊರೋನಾ ಸೋಂಕಿಗೆ ಮೂರನೇ ವ್ಯಕ್ತಿ ಸಾವು

ರಾಜ್ಯದಲ್ಲಿ ಮಹಾಮಾರಿ ಕೊರೊನಾ ಮಂಗಳವಾರ ಮತ್ತೊಂದು ಬಲಿ ಪಡೆದಿದ್ದು, ವಿಜಯಪುರ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ ಮೂರಕ್ಕೆ‌ ಏರಿಕೆ ಆಗಿದೆ.

ವಿಜಯಪುರ: ರಾಜ್ಯದಲ್ಲಿ ಮಹಾಮಾರಿ ಕೊರೊನಾ ಮಂಗಳವಾರ ಮತ್ತೊಂದು ಬಲಿ ಪಡೆದಿದ್ದು, ವಿಜಯಪುರ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ ಮೂರಕ್ಕೆ‌ ಏರಿಕೆ ಆಗಿದೆ.

ಮಂಗಳವಾರ 640ನೇ ಕೊರೊನಾ ಪೀಡಿತ 62 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ.

ಸೋಂಕಿತರು ಈ ಮೊದಲೇ ಮಧುಮೇಹ, ಹೃದಯ ಸಂಬಂಧಿ‌ ಖಾಯಿಲೆಯಿಂದ ಬಳಲುತ್ತಿದ್ದರು. ರೋಗಿ ಸಂಖ್ಯೆ 228 ಸಂಪರ್ಕದಿಂದ ಮೃತ ಮಹಿಳೆಗೆ ಸೋಂಕು ತಗುಲಿತ್ತು. 3-4 ದಿನಗಳ ಹಿಂದೆ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 47 ಪ್ರಕರಣಗಳು ವರದಿಯಾಗಿದ್ದು ಅದರಲ್ಲಿ ಮೂವರು ಸಾವನ್ನಪ್ಪಿದ್ದರೆ 19 ಮಂದಿ ಗುಣಮುಖರಾಗಿದ್ದಾರೆ.

ಇದೀಗ ಮೃತ ಮಹಿಳೆಯ ಅಂತ್ಯ ಸಂಸ್ಕಾರವನ್ನು ವೈದ್ಯಕೀಯ, ಧಾರ್ಮಿಕ ಶಿಷ್ಠಾಚಾರದ ಅನುಸಾರ ನಡೆಸಲಾಗಿದೆ. ಇದಕ್ಕೆ ಹಿಂದೆ ಜಿಲ್ಲೆಯಲ್ಲಿ ಇಬ್ಬರು ಕೊರೋನಾ ಸೋಂಕಿತರು ಸಾವಿಗೀಡಾಗಿದ್ದರು.ರೋಗಿ 257 (69 ವರ್ಷ)ದ ವೃದ್ಧ ಹಾಗೂ ರೋಗಿ ನಂಬರ್ 374 (42 ವರ್ಷ)ದ ವ್ಯಕ್ತಿ ಕೊರೋನಾಗೆ ಬಲಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT