ಸಚಿವ ಪ್ರಭು ಚವ್ಹಾಣ್ 
ರಾಜ್ಯ

ಪಶು ಸಂಗೋಪನೆಯ ಆರ್.ಟಿ-ಪಿಸಿಆರ್ ಉಪಕರಣಗಳು ಕೋವಿಡ್-19 ಪತ್ತೆ ಉದ್ದೇಶಕ್ಕಾಗಿ ಹಸ್ತಾಂತರ-ಪ್ರಭು ಚವ್ಹಾಣ್

ರಾಜ್ಯದಲ್ಲಿ ಕೋವಿಡ್-19  ಸೊಂಕು ಹರಡುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಎಲ್ಲ ಪ್ರಯತ್ನ ಮಾಡುತ್ತಿದ್ದು ರೋಗ ಪತ್ತೆಗಾಗಿ ಬಳಸಲಾಗುವ ಆರ್.ಟಿ ಪಿಸಿಆರ್  (RT-PCR) ಉಪಕರಣಗಳನ್ನು ಆರೋಗ್ಯ ಇಲಾಖೆಗೆ ಒದಗಿಸಲಾಗುತ್ತಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19  ಸೊಂಕು ಹರಡುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಎಲ್ಲ ಪ್ರಯತ್ನ ಮಾಡುತ್ತಿದ್ದು ರೋಗ ಪತ್ತೆಗಾಗಿ ಬಳಸಲಾಗುವ ಆರ್.ಟಿ ಪಿಸಿಆರ್  (RT-PCR) ಉಪಕರಣಗಳನ್ನು ಆರೋಗ್ಯ ಇಲಾಖೆಗೆ ಒದಗಿಸಲಾಗುತ್ತಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪಶುಸಂಗೋಪನೆ ಇಲಾಖೆ ಮತ್ತು ಪಶುವೈದ್ಯಕೀಯ ವಿಶ್ವವಿದ್ಯಾಲಯಗಳ ಲ್ಯಾಬ್ ಗಳಲ್ಲಿ ಈ ಉಪಕರಣಗಳು ಲಭ್ಯವಿದ್ದು,ಇವುಗಳನ್ನು ಸಂಕಷ್ಟದ ಪರಿಸ್ಥಿತಿಯಲ್ಲಿ ಬಳಸಿಕೊಳ್ಳಲು ಆರೋಗ್ಯ ಇಲಾಖೆಗೆ ಪತ್ರ ಬರೆಯಲಾಗಿತ್ತು.

ಸದ್ಯ ಈ ಉಪಕರಣಗಳನ್ನು ಕೊವಿಡ್-೧೯ ಪತ್ತೆಗೆ ಬಳಸಿಕೊಳ್ಳಲು ಸರ್ಕಾರ ಆದೇಶ ಹೊರಡಿಸಿದೆ. ಇದರಿಂದಾಗಿ ಸೋಂಕು ಪತ್ತೆಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು  ತಿಳಿಸಿದ್ದಾರೆ.

 ರೋಗ ಪತ್ತೆ ಹಚ್ಚುವಲ್ಲಿ ಲ್ಯಾಬ್ ಗಳ ಪಾತ್ರ ಪ್ರಮುಖವಾಗಿದ್ದು, ಹೆಬ್ಬಾಳ ಪಶುವೈದ್ಯಕೀಯ ಕಾಲೇಜಿನಲ್ಲಿ ಲಭ್ಯವಿದ್ದ ೨  ಆರ್.ಟಿ ಪಿಸಿಆರ್  ಉಪಕರಣಗಳು ಆರೋಗ್ಯ ಇಲಾಖೆಯ ಲ್ಯಾಬ್ ಗಳಿಗೆ  ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಭು ಚವ್ಹಾಣ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT