ರಾಜ್ಯ

ಚಾಮರಾಜನಗರ: ಹಾಡಹಗಲೇ ಕಾಡಾನೆ ದಾಳಿಗೆ ಮಾನಸಿಕ ಅಸ್ವಸ್ಥ ಬಲಿ

Lingaraj Badiger

ಚಾಮರಾಜನಗರ: ಕಾಡಾನೆಯೊಂದು ದಾಳಿ ಮಾಡಿ ಮಾನಸಿಕ ಅಸ್ವಸ್ಥನೊಬ್ಬನನ್ನು ಬಲಿ ಪಡೆದಿರುವ ಘಟನೆ ಚಾಮರಾಜನಗರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-209ರ ದೊಡ್ಡ ಮೂಡಲಹಳ್ಳಿ ಬಳಿ ನಡೆದಿದೆ.

ಕಳೆದ ಒಂದು ತಿಂಗಳಿನಿಂದಲೂ ಈ ರಾಷ್ಟ್ರೀಯ ಹೆದ್ದಾರಿಯಲ್ಲೇ ಮಾನಸಿಕ ಅಸ್ವಸ್ಥ ತಿರುಗಾಡುತ್ತಿದ್ದ ಎಂದು ತಿಳಿದುಬಂದಿದ್ದು, ರಸ್ತೆ ಬದಿ ನಿಂತಿದ್ದ ಮಾನಸಿಕ ಅಸ್ವಸ್ಥನ ಮೇಲೆ ಕಾಡಾನೆ ದಾಳಿ ಮಾಡಿ ಬಲಿ ಪಡೆದಿದೆ.

ಮಾನಸಿಕ ಅಸ್ವಸ್ಥನ ಗುರುತು ಪತ್ತೆ ಹಚ್ಚಲು ಚಾಮರಾಜನಗರದ ಪೂರ್ವ ಠಾಣೆ ಪೊಲೀಸರು ಮುಂದಾಗಿದ್ದಾರೆ. ಬಿಆರ್​ಟಿ ಹುಲಿ ಯೋಜನೆ ಪ್ರದೇಶದ ಪುಣಜನೂರು ವಲಯ ಅರಣ್ಯಾಧಿಕಾರಿ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

SCROLL FOR NEXT