ಸಂಗ್ರಹ ಚಿತ್ರ 
ರಾಜ್ಯ

ಕರ್ತವ್ಯಕ್ಕೆ ಹಾಜರಾಗುವ ಬಿಎಂಟಿಸಿ ಸಿಬ್ಬಂದಿಗೆ ವೈದ್ಯಕೀಯ ತಪಾಸಣೆ ಕಡ್ಡಾಯ

ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಎಲ್ಲ ಸಿಬ್ಬಂದಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸುವಂತೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಎಲ್ಲ ಸಿಬ್ಬಂದಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸುವಂತೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಹೊಸದಾಗಿ ಕರ್ತವ್ಯಕ್ಕೆ ಹಾಜರಾಗುವ ಪ್ರತಿಯೊಬ್ಬ ಸಿಬ್ಬಂದಿಯನ್ನು ಸಂಸ್ಥೆಯ ಮುಖ್ಯ ವೈದ್ಯಾಧಿಕಾರಿಗಳ ಮೂಲಕ ತಪಾಸಣೆ ಗೊಳಪಡಿಸಬೇಕೆಂದು ಬಿಎಂಟಿಸಿ ನಿರ್ದೇಶನ ನೀಡಿದೆ. ಕೊರೋನಾ ವೈರಸ್ ಹರಡುವಿಕೆಯನ್ನು ತಡೆಯಲು ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗಳನ್ನು  ವೈದ್ಯಕೀಯ ತಪಾಸಣೆಗೆ ಒಳಪಡಿಸುವುದು ಅವಶ್ಯಕವಾಗಿದ್ದು, ಹೊಸದಾಗಿ ಹಾಜರಾಗುವ ಪ್ರತಿಯೊಬ್ಬ ಸಿಬ್ಬಂದಿಯನ್ನು ಸಂಸ್ಥೆಯ ಮುಖ್ಯ ವೈದ್ಯಾಧಿಕಾರಿಗಳ ಮೂಲಕ ತಪಾಸಣೆ ಗೊಳಪಡಿಸಬೇಕೆಂದು ಬಿಎಂಟಿಸಿ ನಿರ್ದೇಶನ ನೀಡಿದೆ.

ವರದಿ ಬಳಿಕವೇ ಕರ್ತವ್ಯಕ್ಕೆ ಹಾಜರಿ!
ಬಿಎಂಟಿಸಿ ಸಿಬ್ಬಂದಿಗಳು ತಪಾಸಣೆ ಬಳಿಕ ವೈದ್ಯಕೀಯ ಪ್ರಮಾಣ ಪತ್ರ ಪಡೆದ ನಂತರವೇ ಕರ್ತವ್ಯಕ್ಕೆ ವರದಿ ಮಾಡಿಸಿಕೊಳ್ಳಬೇಕು. ಎಲ್ಲ ಘಟಕ ಕಾರ್ಯ ಸ್ಥಳದಲ್ಲಿ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಪ್ರತಿದಿನ ಪ್ರತಿಯೊಬ್ಬ ನೌಕರರನ್ನು ಥರ್ಮಲ್ ಸ್ಕ್ಯಾನರ್ ಮೂಲಕ ತಪಾಸಣೆ  ಮಾಡಬೇಕು. ಸಿಬ್ಬಂದಿ ಸದೃಢವೆಂದು ಕಂಡುಬಂದಲ್ಲಿ ಮಾತ್ರ ಕರ್ತವ್ಯ ನಿರ್ವಹಿಸಲು ಅನುಮತಿಸಬೇಕೆಂದು ಬಿಎಂಟಿಸಿಯ ಭದ್ರತಾ ಮತ್ತು ಜಾಗೃತಾ ನಿರ್ದೇಶಕರು ಸೂಚಿಸಿದ್ದಾರೆ. ಬಿಎಂಟಿಸಿಯ ಕೇಂದ್ರ ಕಚೇರಿ, ಎಲ್ಲಾ ಇಲಾಖೆ ಮುಖ್ಯಸ್ಥರು, ಕಾರ್ಯ ವ್ಯವಸ್ಥಾಪಕರು ಎಲ್ಲ ವಿಭಾಗೀಯ  ನಿಯಂತ್ರಣಾಧಿಕಾರಿಗಳು, ಎಲ್ಲ ಘಟಕಗಳ ವ್ಯವಸ್ಥಾಪಕರುಗಳಿಗೆ ಈ ನಿರ್ದೇಶನವನ್ನು ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪರೀಕ್ಷಾ ವ್ಯವಸ್ಥೆ ಸುಧಾರಣೆ: ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ; ಪ್ರಧಾನಿ ಮೋದಿ ಘೋಷಣೆ! Video

3rd T20: ಜಿಂಬಾಬ್ವೆ ವಿರುದ್ಧ 35 ರನ್ ಗೆಲುವು; 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿದ ಭಾರತ!

ನಾಲಾಯಕ್ ಗೃಹ ಸಚಿವ ಟೀಕೆ: ವಿಜಯೇಂದ್ರಗೆ ಭಯ-ಹತಾಶೆ ಶುರುವಾಗಿರುವುದು ಅವರ ಘನತೆಗೆ ತಕ್ಕದ್ದೇ? ಪ್ರಿಯಾಂಕ್ ಖರ್ಗೆ ತಿರುಗೇಟು!

ಬಿಹಾರ: ಹಿಂಸಾಚಾರಕ್ಕೆ ತಿರುಗಿದ Gen-Z ಪ್ರತಿಭಟನೆ; ಕಲ್ಲು ತೂರಾಟ; BDO Ritesh ತಲೆಬುರುಡೆಗೆ ತೀವ್ರ ಗಾಯ!

'ಸ್ವಲ್ಪ ಸಮಯ ನೀಡಿ': CJPಯ ಮುಂದಿನ ಕಾರ್ಯತಂತ್ರ ಶೀಘ್ರದಲ್ಲೇ ಪ್ರಕಟ- ಅಭಿಜೀತ್ ಡಿಪ್ಕೆ