ಸಾಂದರ್ಭಿಕ ಚಿತ್ರ 
ರಾಜ್ಯ

ಶಿವಾಜಿನಗರದ ಹೊಟೇಲ್ ನ ಹೌಸ್ ಕೀಪಿಂಗ್ ಸಿಬ್ಬಂದಿಗೆ ಕೊರೋನಾ: ವಾಸವಿದ್ದ ಏರಿಯಾ ಸೀಲ್ ಡೌನ್ 

ಶಿವಾಜಿನಗರ ಹೊಟೇಲೊಂದರ ಹೌಸ್ ಕೀಪಿಂಗ್ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆ ವ್ಯಕ್ತಿ ವಾಸಿಸುತ್ತಿದ್ದ ಕಟ್ಟಡದ ಸುತ್ತಮುತ್ತ ಪ್ರದೇಶವನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ.

ಬೆಂಗಳೂರು: ಶಿವಾಜಿನಗರ ಹೊಟೇಲೊಂದರ ಹೌಸ್ ಕೀಪಿಂಗ್ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆ ವ್ಯಕ್ತಿ ವಾಸಿಸುತ್ತಿದ್ದ ಕಟ್ಟಡದ ಸುತ್ತಮುತ್ತ ಪ್ರದೇಶವನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ.

ಜನರ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಈ ನಿರ್ಧಾರಕ್ಕೆ ಬಂದಿದೆ ಎಂದು ಪುಲಕೇಶಿನಗರದ ಎಸಿಪಿ ಫಾತಿಮಾ ಇಂದು ಸ್ಥಳಕ್ಕೆ ಭೇಟಿ ನೀಡಿ ಜನತೆಗೆ ತಿಳಿಸಿದ್ದಾರೆ.

ಜನರ ನೆರವಿಗೆ ಸಿದ್ದ: ಸೀಲ್ ಡೌನ್ ಆದೇಶ ಇಂದಿನಿಂದ ಜಾರಿಗೆ ಬರಲಿದ್ದು ಇನ್ನು 15 ದಿನ ಚಾಲ್ತಿಯಲ್ಲಿರುತ್ತದೆ. ಕೊರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ತೆಗೆದುಕೊಂಡಿದ್ದು ನಿವಾಸಿಗಳು ಯಾವುದೇ ಕಾರಣಕ್ಕೂ ಆತಂಕಗೊಳಗಾಗಬೇಕಾಗಿಲ್ಲ. ಜನರು ತಮ್ಮ ಮನೆಯ ಗೇಟು ದಾಟಿ ಆಚೆ ಬರುವಂತಿಲ್ಲ.ಮನೆ ಮುಂದೆ ಚೆಕ್ ಪೋಸ್ಟ್ ಇರುತ್ತದೆ. ಅಲ್ಲದೆ ಬಿಬಿಎಂಪಿ, ಪೊಲೀಸ್ ಸಿಬ್ಬಂದಿಯ ಸಂಪರ್ಕ ಸಂಖ್ಯೆಯನ್ನು ನೀಡಲಾಗುತ್ತದೆ. ಬಿಬಿಎಂಪಿಯ ಸಿಬ್ಬಂದಿ ದಿನಪೂರ್ತಿ ಹಗಲು-ರಾತ್ರಿ ಸೇವೆಗೆ ಇರುತ್ತಾರೆ. ಅಗತ್ಯವಸ್ತುಗಳನ್ನು ಮನೆ ಬಾಗಿಲಿಗೆ ತಂದುಕೊಡುವ ವ್ಯವಸ್ಥೆ ಮಾಡುತ್ತಾರೆ.

ವೈದ್ಯಕೀಯ ಸೇವೆ: ನಿವಾಸಿಗಳಿಗೆ ಯಾವುದೇ ವೈದ್ಯಕೀಯ ಸೇವೆ ಬೇಕೆಂದರು ಸಹ ಅಲ್ಲಲ್ಲಿ ವೈದ್ಯಾಧಿಕಾರಿಯನ್ನು ನೇಮಿಸಲಾಗುತ್ತದೆ. ಅವರ ಮೊಬೈಲ್ ಸಂಖ್ಯೆ ಕೂಡ ಇರುತ್ತದೆ. ಅವರಲ್ಲಿ ಹೇಳಿಕೊಂಡರೆ ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂದು ಎಸಿಪಿ ಫಾತಿಮಾ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT