ಸಾಂದರ್ಭಿಕ ಚಿತ್ರ 
ರಾಜ್ಯ

ವಿದೇಶಗಳಲ್ಲಿರುವ ಭಾರತೀಯರನ್ನು ಇಂದಿನಿಂದ ಹೊತ್ತು ತರಲಿದೆ ಏರ್ ಇಂಡಿಯಾ: 14 ಸಾವಿರ ಮಂದಿ ತವರಿಗೆ!

ದೇಶೀಯ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಮತ್ತು ಅದರ ಉಪ ಸಂಸ್ಥೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಗುರುವಾರ 16 ದೇಶಗಳಲ್ಲಿರುವ ಭಾರತೀಯರನ್ನು ಹೊತ್ತು ತರಲಿದೆ.

ಬೆಂಗಳೂರು: ದೇಶೀಯ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಮತ್ತು ಅದರ ಉಪ ಸಂಸ್ಥೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಗುರುವಾರ 16 ದೇಶಗಳಲ್ಲಿರುವ ಭಾರತೀಯರನ್ನು ಹೊತ್ತು ತರಲಿದೆ.

ಈ ಬಗ್ಗೆ ಮಾಹಿತಿ ನೀಡಿದ ನಾಗರಿಕ ವಿಮಾನಯಾನ ಸಂಸ್ಥೆಯ ಮಹಾ ನಿರ್ದೇಶಕ ಅರುಣ್ ಕುಮಾರ್, ನಿನ್ನೆಯೇ ಭಾರತೀಯರನ್ನು ಹೊತ್ತು ತರುವ ಕಾರ್ಯ ಆರಂಭವಾಗಬೇಕಿತ್ತು. ಆದರೆ ಎಲ್ಲಾ ಸಿಬ್ಬಂದಿಯನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಬೇಕಾಗಿದ್ದರಿಂದ ಒಂದು ದಿನ ತಡವಾಯಿತು ಎಂದರು.

ಇಂದು ನಾಲ್ಕು ವಿಮಾನಗಳು ದೆಹಲಿಯಿಂದ ಸಾನ್ ಫ್ರಾನ್ಸಿಸ್ಕೊ, ಕೊಚ್ಚಿಯಿಂದ ಅಬು ದಾಬಿ, ದೆಹಲಿಯಿಂದ ಸಿಂಗಾಪುರ ಮತ್ತು ಕಲ್ಲಿಕೋಟೆಯಿಂದ ದುಬೈಗೆ ಹಾರಾಟ ನಡೆಸಲಿವೆ. ಇಂದಿನಿಂದ ಭಾರತಕ್ಕೆ ಕರೆತರಲಾಗುತ್ತದೆ ಎಂದು ಹೇಳಿದರು.

ಒಂದು ವಾರದಲ್ಲಿ ಏರ್ ಇಂಡಿಯಾ 12 ದೇಶಗಳಿಂದ 64 ವಿಮಾನಗಳಲ್ಲಿ 14 ಸಾವಿರದ 800 ಮಂದಿಯನ್ನು ಕರೆತರಲಾಗುತ್ತದೆ ಎಂದು ಮೊನ್ನೆ ನಾಗರಿಕ ವಿಮಾನಯಾನ ಸಚಿವಾಲಯ ಹೊರಡಿಸಿರುವ ಪ್ರಕಟಣೆ ತಿಳಿಸಿದೆ.

ನಿನ್ನೆ ಏರ್ ಇಂಡಿಯಾ ಪೋರ್ಟಲ್ ಟಿಕೆಟ್ ಬುಕ್ಕಿಂಗ್ ಆರಂಭಿಸಿದೆ. ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಅರುಣ್ ಕುಮಾರ್, ಭಾರತೀಯರನ್ನು ಕರೆತರುವ ಯೋಜನೆಯಲ್ಲಿ ಸ್ವಲ್ಪ ವಿಳಂಬವಾಯಿತು. ನಿನ್ನೆ ಪೈಲಟ್ ಗಳು ಮತ್ತು ವಿಮಾನದ ಸಿಬ್ಬಂದಿಯ ಕೋವಿಡ್-19 ಪರೀಕ್ಷೆಯನ್ನು ಮಾಡಬೇಕಾಯಿತು. ಅದು ಪೂರ್ಣವಾಗಿದ್ದು ನಾಳೆಯಿಂದ ಕಾರ್ಯಾಚರಣೆ ಆರಂಭವಾಗಲಿದೆ. ವಿದೇಶಗಳಿಗೆ ಹೋಗಲು ಬಯಸುವ ಭಾರತೀಯರು ಸಹ ಆಲೋಚನೆ ಮಾಡಬಹುದು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT