ಸಾಂದರ್ಭಿಕ ಚಿತ್ರ 
ರಾಜ್ಯ

ವಿದೇಶಗಳಲ್ಲಿರುವ ಭಾರತೀಯರನ್ನು ಇಂದಿನಿಂದ ಹೊತ್ತು ತರಲಿದೆ ಏರ್ ಇಂಡಿಯಾ: 14 ಸಾವಿರ ಮಂದಿ ತವರಿಗೆ!

ದೇಶೀಯ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಮತ್ತು ಅದರ ಉಪ ಸಂಸ್ಥೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಗುರುವಾರ 16 ದೇಶಗಳಲ್ಲಿರುವ ಭಾರತೀಯರನ್ನು ಹೊತ್ತು ತರಲಿದೆ.

ಬೆಂಗಳೂರು: ದೇಶೀಯ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಮತ್ತು ಅದರ ಉಪ ಸಂಸ್ಥೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಗುರುವಾರ 16 ದೇಶಗಳಲ್ಲಿರುವ ಭಾರತೀಯರನ್ನು ಹೊತ್ತು ತರಲಿದೆ.

ಈ ಬಗ್ಗೆ ಮಾಹಿತಿ ನೀಡಿದ ನಾಗರಿಕ ವಿಮಾನಯಾನ ಸಂಸ್ಥೆಯ ಮಹಾ ನಿರ್ದೇಶಕ ಅರುಣ್ ಕುಮಾರ್, ನಿನ್ನೆಯೇ ಭಾರತೀಯರನ್ನು ಹೊತ್ತು ತರುವ ಕಾರ್ಯ ಆರಂಭವಾಗಬೇಕಿತ್ತು. ಆದರೆ ಎಲ್ಲಾ ಸಿಬ್ಬಂದಿಯನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಬೇಕಾಗಿದ್ದರಿಂದ ಒಂದು ದಿನ ತಡವಾಯಿತು ಎಂದರು.

ಇಂದು ನಾಲ್ಕು ವಿಮಾನಗಳು ದೆಹಲಿಯಿಂದ ಸಾನ್ ಫ್ರಾನ್ಸಿಸ್ಕೊ, ಕೊಚ್ಚಿಯಿಂದ ಅಬು ದಾಬಿ, ದೆಹಲಿಯಿಂದ ಸಿಂಗಾಪುರ ಮತ್ತು ಕಲ್ಲಿಕೋಟೆಯಿಂದ ದುಬೈಗೆ ಹಾರಾಟ ನಡೆಸಲಿವೆ. ಇಂದಿನಿಂದ ಭಾರತಕ್ಕೆ ಕರೆತರಲಾಗುತ್ತದೆ ಎಂದು ಹೇಳಿದರು.

ಒಂದು ವಾರದಲ್ಲಿ ಏರ್ ಇಂಡಿಯಾ 12 ದೇಶಗಳಿಂದ 64 ವಿಮಾನಗಳಲ್ಲಿ 14 ಸಾವಿರದ 800 ಮಂದಿಯನ್ನು ಕರೆತರಲಾಗುತ್ತದೆ ಎಂದು ಮೊನ್ನೆ ನಾಗರಿಕ ವಿಮಾನಯಾನ ಸಚಿವಾಲಯ ಹೊರಡಿಸಿರುವ ಪ್ರಕಟಣೆ ತಿಳಿಸಿದೆ.

ನಿನ್ನೆ ಏರ್ ಇಂಡಿಯಾ ಪೋರ್ಟಲ್ ಟಿಕೆಟ್ ಬುಕ್ಕಿಂಗ್ ಆರಂಭಿಸಿದೆ. ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಅರುಣ್ ಕುಮಾರ್, ಭಾರತೀಯರನ್ನು ಕರೆತರುವ ಯೋಜನೆಯಲ್ಲಿ ಸ್ವಲ್ಪ ವಿಳಂಬವಾಯಿತು. ನಿನ್ನೆ ಪೈಲಟ್ ಗಳು ಮತ್ತು ವಿಮಾನದ ಸಿಬ್ಬಂದಿಯ ಕೋವಿಡ್-19 ಪರೀಕ್ಷೆಯನ್ನು ಮಾಡಬೇಕಾಯಿತು. ಅದು ಪೂರ್ಣವಾಗಿದ್ದು ನಾಳೆಯಿಂದ ಕಾರ್ಯಾಚರಣೆ ಆರಂಭವಾಗಲಿದೆ. ವಿದೇಶಗಳಿಗೆ ಹೋಗಲು ಬಯಸುವ ಭಾರತೀಯರು ಸಹ ಆಲೋಚನೆ ಮಾಡಬಹುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!