ಪ್ರತಿಭಟನಾ ನಿರತ ಗ್ರಾಮಸ್ಛರು 
ರಾಜ್ಯ

ಕುಡಿಯುವ ನೀರು ಸಿಗದಿದ್ದಕ್ಕೆ ಜನಪ್ರತಿನಿಧಿಗಳನ್ನೇ ಕೂಡಿ ಹಾಕಿದ ಗ್ರಾಮಸ್ಥರು! 

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮಂಗಳೂರಿನ ಗ್ರಾಮಸ್ಥರು ನೇರ ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ, ಒಳಗಿದ್ದ ಅಧಿಕಾರಿಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳನ್ನು ಕೂಡಿ ಹಾಕಿದರು

ಕೊಪ್ಪಳ: ಕೊಪ್ಪಳ ಬರದ ನಾಡು, ಬಿಸಿಲ ನಾಡು ಅನ್ವರ್ಥವನ್ನು ಹೊಂದಿರುವುದು ಹೊಸದೇನಲ್ಲ. ಕೊರೋನಾದ ಈ ದಿನಗಳಲ್ಲಿ ಎಲ್ಲರ ಗಮನ ಮಹಾಮಾರಿ ವೈರಸ್ ನಿಯಂತ್ರಣ,  ಮಟ್ಟ ಹಾಕುವುದರ ಕಡೆಗಿದೆ. ಜಿಲ್ಲೆಯ ಹಲವು ಗ್ರಾಮೀಣ ಪ್ರದೇಶಗಳ ಪ್ರತಿ ಬೇಸಿಗೆಯ ಬವಣೆ ಕುಡಿಯುವ ನೀರಿನ ಸಮಸ್ಯೆ‌ಯತ್ತ ಚಿತ್ತವನ್ನೇ ಹರಿಸಲಾಗಿಲ್ಲ.

ಇದುವರೆಗೂ ಜನ ಮನೆ ಬಿಟ್ಟು ಹೊರಗಡೆ ಬಂದದ್ದು ಕಡಿಮೆ. ಕೆರೆ-ಕಟ್ಟೆ-ಬಾವಿಗಳಲ್ಲಿ ಅಳಿದುಳಿದ ನೀರಿನಲ್ಲಿ ಹೇಗೋ ಇದುವರೆಗೂ ದಿನಗಳನ್ನು ದೂಡಿದರು. ಈಗ ಅವುಗಳು ಸಹ ಬತ್ತಿ ಹೋಗಿವೆ. ಬೇಸಿಗೆಯ ಹೊಡೆತಕ್ಕೆ ಹಾಕಲಾಗಿದ್ದ ಬೋರ್‌ವೆಲ್‌ಗಳೂ ಚಾರ್ಜ್ ಆಗುತ್ತಿಲ್ಲ. ಹಾಗಾಗಿ ಸ್ಥಳೀಯ ಸಂಸ್ಥೆ ಪೂರೈಸುವ ನೀರಿನ ಹಾದಿ ಕಾಯುವುದು ಅನಿವಾರ್ಯವಾಗಿದೆ.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮಂಗಳೂರಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಗ್ರಾಮಸ್ಥರು ಗ್ರಾಮ ಪಂಚಾಯತಿ ಅಧ್ಯಕ್ಷ, ಸದಸ್ಯರು‌ ಹಾಗೂ ಅಧಿಕಾರಿಗಳಿಗೆ ನೀರಿನ ಸಮಸ್ಯೆಯನ್ನು ಗಮನಕ್ಕೆ ತಂದು ಬಗೆಹರಿಸಲು ಮನವಿ ಮಾಡಿದ್ದರು.

ಎರಡು ದಿನ ಕಳೆದರೂ ನೀರಿನ ಸಮಸ್ಯೆ ನೀಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ನೇರ ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ, ಒಳಗಿದ್ದ ಅಧಿಕಾರಿಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳನ್ನು ಕೂಡಿ ಹಾಕಿದರು. ಇದ್ದ ಏಕೈಕ ಶುದ್ಧ ಕುಡಿಯುವ ನೀರಿನ ಘಟಕವೂ ದುರಸ್ತಿಗೆ ಬಂದಿದೆ. ಅದು ಸರಿ ಇದ್ದಿದ್ದರೆ ಸಮಸ್ಯೆ‌ ಕೊಂಚಮಟ್ಟಿಗಾದರೂ ಬಗೆಹರಿಯುತ್ತಿತ್ತು. ಇದನ್ನೆಲ್ಲ ಸಾಕಷ್ಟು ಬಾರಿ ಗಮನಕ್ಕೆ ತಂದರೂ ಎಮ್ಮೆ ಚರ್ಮದವರಾದ ನಿಮಗೆ ಅರ್ಥ ಆಗಲ್ವಾ? ಇಲ್ಲಿನ‌ ಜನ ನೀರು ಬಿಟ್ಟು ಮೂತ್ರ ಕುಡಿಯಬೇಕಾ? ಎಂದು ಜಮಾಯಿಸಿದ್ದ ಮಹಿಳಾ ಮಣಿಗಳು ಆಕ್ರೋಶ ವ್ಯಕ್ತಪಡಿಸಿದರು. 

ಗ್ರಾಮಸ್ಥರ ಏಕಾಏಕಿ‌ ಮುತ್ತಿಗೆಯಿಂದ ಕಕ್ಕಾಬಿಕ್ಕಿಯಾದ ಅಧಿಕಾರಿಗಳು ಮೂಕಪ್ರೇಕ್ಷಕರಂತೆ ಕುಳಿತಿದ್ದರು. ಕೊನೆಗೆ ಮತ್ತೇರಡು ದಿನ ಗಡುವು ನೀಡಿರುವ ಗ್ರಾಮಸ್ಥರು , ಗಡುವಿನ ಒಳಗಾಗಿ ನೀರು ಪೂರೈಕೆಯಾಗದಿದ್ದರೆ ಪ್ರತಿಭಟನೆ ಸ್ವರೂಪ ಮತ್ತಷ್ಟು ಕಠಿಣವಾಗಿರುತ್ತದೆ ಎಂದು ಎಚ್ಚರಿಸಿದ್ದಾರೆ

ವರದಿ: ಬಸವರಾಜ ಕರುಗಲ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT