ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಗೆಳೆಯನನ್ನು ಕೊಂದು ಸ್ನೇಹಿತ ಪರಾರಿ

ಕ್ಷುಲ್ಲಕ ಕಾರಣಕ್ಕೆ ನಶೆಯಲ್ಲಿದ್ದ ಸ್ನೇಹಿತರಿಬ್ಬರ ನಡುವೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಆರ್.ಟಿ. ನಗರ ಠಾಣಾ ವ್ಯಾಪ್ತಿಯ ಮಠದಹಳ್ಳಿಯ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ನಶೆಯಲ್ಲಿದ್ದ ಸ್ನೇಹಿತರಿಬ್ಬರ ನಡುವೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಆರ್.ಟಿ. ನಗರ ಠಾಣಾ ವ್ಯಾಪ್ತಿಯ ಮಠದಹಳ್ಳಿಯ ಬಳಿ ಬುಧವಾರ ತಡರಾತ್ರಿ ನಡೆದಿದೆ.

28 ವರ್ಷದ ಕಿಶೋರ್ ಕೊಲೆಯಾದ ಯುವಕ.  ಕೊಲೆಯಾದ ಕಿಶೋರ್ ಹಾಗೂ ಆತನ ಸ್ನೇಹಿತ ರಾಜೇಶ್ ಪಾರ್ಟಿ ಮಾಡಿದ್ದು, ಮದ್ಯದ ನಶೆಯಲ್ಲಿದ್ದ ಇಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಆರಂಭವಾಗಿದೆ. ಜಗಳ  ತಾರಕಕ್ಕೇರಿದ ಪರಿಣಾಮ ಕಿಶೋರ್ ಎದೆ ಭಾಗಕ್ಕೆ ಆತನ ಸ್ನೇಹಿತ ಹರಿತವಾದ ಚಾಕುವಿನಿಂದ ಚುಚ್ಚಿ ಪರಾರಿಯಾಗಿದ್ದಾನೆ.

ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT