ರಾಜ್ಯ

ಬೆಂಗಳೂರು: ಗೆಳೆಯನನ್ನು ಕೊಂದು ಸ್ನೇಹಿತ ಪರಾರಿ

Shilpa D

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ನಶೆಯಲ್ಲಿದ್ದ ಸ್ನೇಹಿತರಿಬ್ಬರ ನಡುವೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಆರ್.ಟಿ. ನಗರ ಠಾಣಾ ವ್ಯಾಪ್ತಿಯ ಮಠದಹಳ್ಳಿಯ ಬಳಿ ಬುಧವಾರ ತಡರಾತ್ರಿ ನಡೆದಿದೆ.

28 ವರ್ಷದ ಕಿಶೋರ್ ಕೊಲೆಯಾದ ಯುವಕ.  ಕೊಲೆಯಾದ ಕಿಶೋರ್ ಹಾಗೂ ಆತನ ಸ್ನೇಹಿತ ರಾಜೇಶ್ ಪಾರ್ಟಿ ಮಾಡಿದ್ದು, ಮದ್ಯದ ನಶೆಯಲ್ಲಿದ್ದ ಇಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಆರಂಭವಾಗಿದೆ. ಜಗಳ  ತಾರಕಕ್ಕೇರಿದ ಪರಿಣಾಮ ಕಿಶೋರ್ ಎದೆ ಭಾಗಕ್ಕೆ ಆತನ ಸ್ನೇಹಿತ ಹರಿತವಾದ ಚಾಕುವಿನಿಂದ ಚುಚ್ಚಿ ಪರಾರಿಯಾಗಿದ್ದಾನೆ.

ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

SCROLL FOR NEXT