ಯಡಿಯೂರಪ್ಪ 
ರಾಜ್ಯ

ವಾಪಸ್ ಕರೆಸಿಕೊಳ್ಳುವಂತೆ ಮುಖ್ಯಮಂತ್ರಿಗೆ ಜಪಾನ್ ಕನ್ನಡಿಗರ ಮನವಿ

ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಜಪಾನ್ ನಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ವಾಪಸ್ ಕರೆಸಿಕೊಳ್ಳಲು ಸಹಾಯ ಮಾಡುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ,

ಬೆಂಗಳೂರು: ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಜಪಾನ್ ನಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ವಾಪಸ್ ಕರೆಸಿಕೊಳ್ಳಲು ಸಹಾಯ ಮಾಡುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ,

ಜಪಾನ್ ನಲ್ಲಿ ಒಟ್ಟು 220 ಮಂದಿ ಭಾರತೀಯರು ಸಿಲುಕಿದ್ದು ಅದರಲ್ಲಿ ಕನ್ನಡಿಗರು ಸಹ ಸೇರಿದ್ದಾರೆ. ಬೇರೆ ರಾಜ್ಯಗಳು ಹೊರದೇಶದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಕರೆಸಿಕೊಂಡಿವೆ, ಅದರಂತೆಯೇ ಕನ್ನಡಿಗರನ್ನು ಕರೆದುಕೊಂಡು ಬರಲು ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಸದ್ಯ ಟೋಕಿಯೋದಲ್ಲಿ ಸಿಲುಕಿರುವ ಬೆಂಗಳೂರಿನ ಕೀರ್ತನ್ ಶಶಿಧರ್ ಎಂ ಸಿಎಂ ಕಚೇರಿಗೆ ಮೇಲ್ ಕಳುಹಿಸಿದ್ದಾರೆ. ಜಪಾನ್ ನಲ್ಲಿ ಒಟ್ಟು 220 ಮಂದಿ ಭಾರತೀಯರಿದ್ದು ಅದರಲ್ಲಿ 20 ಕನ್ನಡಿಗರು ಸೇರಿದ್ದಾರೆ, ಅವರನ್ನೆಲ್ಲಾ ವಾಪಸ್ ಕರೆಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ನಮ್ಮ ಉತ್ಸಾಹವನ್ನು ಇಮ್ಮಡಿಗೊಳಿಸಲು ನಿಮ್ಮ ಸಹಾಯ ಅಗತ್ಯವಿದೆ, ನೀವು ಕೂಡ ನಮ್ಮನ್ನು ಕರೆಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಜಪಾನ್ ನಿಂದ ಸ್ಥಳಾಂತರಗೊಂಡ ಮೊದಲ ಹಂತದ ಭಾರತೀಯರಲ್ಲಿ ಕನ್ನಡಿರಾರು ಇರಲಿಲ್ಲ, ಹೀಗಾಗಿ ಇನ್ನೊಂದು ಹಂತದಲ್ಲಿ ನಮ್ಮನ್ನು ಕರೆದೊಯ್ಯಬೇಕು ಎಂದು ಹೇಳಿದ್ದಾರೆ.

ಜಪಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಲ್ಲಿ ಸಿಲುಕಿರುವ ಎಲ್ಲಾ ಭಾರತೀಯರ ಮಾಹಿತಿ ಪಡೆಯುತ್ತಿದ್ದು, ಶೀಘ್ರವೇ ವಾಪಸ್ ಕರೆಸಿಕೊಳ್ಳುವುದಾಗಿ ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT