ಸಂಗ್ರಹ ಚಿತ್ರ 
ರಾಜ್ಯ

ಆಟೋ, ಟ್ಯಾಕ್ಸಿ ಚಾಲಕರಿಗೆ ಪರಿಹಾರ: ಸೇವಾಸಿಂಧು ಪೋರ್ಟಲ್‌ ಗಳ ಮೂಲಕ ಅರ್ಜಿ ಸ್ವೀಕಾರ

ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿರುವ ಆಟೋ, ಟ್ಯಾಕ್ಸಿ ಚಾಲಕರು ಮುಖ್ಯಮಂತ್ರಿಗಳು ಘೋಷಿಸಿರುವ ಪರಿಹಾರ ಹಣ ಸ್ವೀಕರಿಸಲು ಸೇವಾಸಿಂಧು ಪೋರ್ಟಲ್‌ಗಳ ಮೂಲಕ ಅರ್ಜಿ ಸಲ್ಲಿಸಬಹುದು.

ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿರುವ ಆಟೋ, ಟ್ಯಾಕ್ಸಿ ಚಾಲಕರು ಮುಖ್ಯಮಂತ್ರಿಗಳು ಘೋಷಿಸಿರುವ ಪರಿಹಾರ ಹಣ ಸ್ವೀಕರಿಸಲು ಸೇವಾಸಿಂಧು ಪೋರ್ಟಲ್‌ಗಳ ಮೂಲಕ ಅರ್ಜಿ ಸಲ್ಲಿಸಬಹುದು.

ಹೌದು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಒಂದು ಬಾರಿ ಘೋಷಿಸಿರುವ 5000 ರೂ.ಪರಿಹಾರಕ್ಕಾಗಿ ಯಾರೂ ಅಂಚೆ ಕಚೇರಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲ. ಪರಿಹಾರ ಧನ ನೀಡಲು ಅರ್ಜಿಗಳನ್ನು ಆನ್‌ಲೈನ್‌ಗಳಲ್ಲಿ  ಸೇವಾಸಿಂಧು ಪೋರ್ಟಲ್‌ಗಳ ಮೂಲಕ ಸ್ವೀಕರಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ತಿಳಿಸಿದ್ದಾರೆ.

ಕೋವಿಡ್‌ 19 ಸಂಬಂಧ ಮುಖ್ಯಮಂತ್ರಿಗಳು ಮೇ 6ರಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಆಟೋ ಹಾಗೂ ಟ್ಯಾಕ್ಸಿ ಚಾಲಕರು ಒಂದು ಬಾರಿ ಪರಿಹಾರವಾಗಿ 5000 ರೂ.ಗಳನ್ನು ನೀಡಲು ನಿರ್ಧರಿಸಿರುವುದಾಗಿ ಘೋಷಿಸಿದ್ದಾರೆ. ಈ ಪರಿಹಾರ ಧನವನ್ನು ಪಡೆಯಲು ಆಟೋ ರಿಕ್ಷಾ ,  ಟ್ಯಾಕ್ಸಿ ಚಾಲಕರು ಅಂಚೆ ಕಚೇರಿಗಳ ಎದುರಿಗೆ ಸರತಿ ಸಾಲಿನಲ್ಲಿ ನಿಂತು ಅರ್ಜಿಗಳನ್ನು ಕಳುಹಿಸಲು ಪ್ರಯತ್ನಿಸುತ್ತಿರುವುದು ಗಮನಕ್ಕೆ ಬಂದಿದೆ. 

ಪರಿಹಾರ ಧನ ನೀಡಲು ಅರ್ಜಿಗಳನ್ನು ಆನ್‌ಲೈನ್‌ಗಳಲ್ಲಿ ಸೇವಾಸಿಂಧು ಪೋರ್ಟಲ್‌ಗಳ ಮೂಲಕ ಸ್ವೀಕರಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಆದ್ದರಿಂದ ಆಟೋ ರಿಕ್ಷಾ ಚಾಲಕರು ಅರ್ಜಿಗಳನ್ನು ಸಲ್ಲಿಸಲು ಅನವಶ್ಯಕವಾಗಿ ಪರಿಶ್ರಮ ಪಡುವ ಅಗತ್ಯವಿಲ್ಲ. ಆನ್‌ಲೈನ್ ಮೂಲಕ ಅರ್ಜಿ  ಸಲ್ಲಿಸುವ ಎಲ್ಲಾ ಅರ್ಹ ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಪರಿಹಾರ ಧನವನ್ನು ಅವರ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು ಆದ್ದರಿಂದ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT