ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಕ್ಷುಲ್ಲಕ ಜಗಳ; ನೈಜೀರಿಯಾ ಪ್ರಜೆಯ ಕೊಲೆ

ಸ್ನೇಹಿತರಿಬ್ಬರ ನಡುವೆ ನಡೆದ ಕ್ಷುಲ್ಲಕ ಜಗಳ ನೈಜೀರಿಯಾ ಪ್ರಜೆಯೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗಿನ ಜಾವ ನಡೆದಿದೆ.

ಬೆಂಗಳೂರು: ಸ್ನೇಹಿತರಿಬ್ಬರ ನಡುವೆ ನಡೆದ ಕ್ಷುಲ್ಲಕ ಜಗಳ ನೈಜೀರಿಯಾ ಪ್ರಜೆಯೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗಿನ ಜಾವ ನಡೆದಿದೆ.

ನೈಜೀರಿಯಾ ಪ್ರಜೆ ಜಾನ್‌ ಸಂಡೆ (30) ಕೊಲೆಯಾದ ವ್ಯಕ್ತಿ. ಕೊಲೆ ಆರೋಪಿ ಮನೋಜ್‌ ಕೂಡ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಜಾನ್‌ ಸಂಡೆ ಹಾಗೂ ಮನೋಜ್ ಸ್ನೇಹಿತರಾಗಿದ್ದಾರೆ. ಅವರಿಬ್ಬರ ನಡುವೆ ಯಾವ ವಿಷಯಕ್ಕೆ ಜಗಳ ಉಂಟಾಗಿದೆ ಎಂಬುದು ತಿಳಿದುಬಂದಿಲ್ಲ.

ಕೆಲಸಕ್ಕಾಗಿ ನೈಜೀರಿಯಾದಿಂದ ಭಾರತಕ್ಕೆ ಬಂದು ಬೆಂಗಳೂರಿನ ಕಾಚರಕನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಜಾನ್ ಸಂಡೆ ನಿನ್ನೆ ರಾತ್ರಿ ಮತ್ತೋರ್ವ ಸ್ನೇಹಿತನ ಮನೆಗೆ ಹೋಗಿದ್ದಾರೆ. ಅಲ್ಲಿ ಮನೋಜ್ ಕೂಡ ಇದ್ದು, ಮದ್ಯ ರಾತ್ರಿವರೆಗೂ ಹರಟೆ ಹೊಡೆಯುತ್ತಾ ಮದ್ಯ ಪಾನ ಮಾಡುತ್ತಿದ್ದ ಅವರ ನಡುವೆ ಯಾವುದೇ ವಿಷಯಕ್ಕೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋದಾಗ ಜಾನ್‌ ತನ್ನಲ್ಲಿದ್ದ ಚಾಕುವಿನಿಂದ ಮನೋಜ್‌ನ ಹೊಟ್ಟೆಗೆ ಇರಿದಿದ್ದಾನೆ. ತಕ್ಷಣ ಮನೋಜ್ ಅದೇ ಚಾಕುವಿನಿಂದ ಜಾನ್‌ಗೆ ಇರಿದಿದ್ದು, ತೀವ್ರ ರಕ್ತಸ್ರಾವದಿಂದ ಆತ ಮೃತಪಟ್ಟಿದ್ದಾನೆ.

ಅದೇ ಮನೆಯಲ್ಲಿದ್ದ ಸ್ನೇಹಿತ ತಕ್ಷಣ ಸ್ಥಳೀಯರ ನೆರವಿನಿಂದ ಮನೋಜ್‌ನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆತ ಪರಿಸ್ಥಿತಿ ಗಂಭೀರವಾಗಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ವಿಷಯ ತಿಳಿದ ಬಾಣಸವಾಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಡಾ.ಶರಣಪ್ಪ ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT