ವಲಸಿಗ ಕಾರ್ಮಿಕರು 
ರಾಜ್ಯ

ವೈರಸ್ ಇಲ್ಲದವರಿಗಷ್ಟೇ ರಾಜ್ಯ ಪ್ರವೇಶಕ್ಕೆ ಅವಕಾಶ: ತವರಿಗೆ ಮರಳುತ್ತಿರುವ ವಲಸಿಗರ ಕುರಿತು ಒಡಿಶಾ ಸರ್ಕಾರ

ರಾಜ್ಯ ಸರ್ಕಾರ ಹಾಗೂ ನೈಋತ್ಯ ರೈಲ್ವೇ ಸಹಯೋಗದಲ್ಲಿ ಲಾಕ್'ಡೌನ್ ನಿಂದ ರಾಜಧಾನಿಯಲ್ಲಿ ಸಿಲುಕಿಕೊಂಡಿದ್ದ ಹೊರರಾಜ್ಯದ ಸಾವಿರಾರು ವಲಸೆ ಕಾರ್ಮಿಕರನ್ನು ಅವರವರ ರಾಜ್ಯಗಳಿಗೆ ಕಳುಹಿಸಲು ಸಿದ್ಧತೆ ನಡೆಸುತ್ತಿದೆ. ಈ ನಡುವಲ್ಲೇ ಒಡಿಶಾದ ನ್ಯಾಯಾಲಯದ ಆದೇಶ ಹೊರಡಿಸಿದ್ದು, ವೈರಸ್ ಇಲ್ಲವೆಂದು ಪ್ರಮಾಣಪತ್ರ ಸಲ್ಲಿಸಿದವರಿಗಷ್ಟೇ ರಾಜ್ಯ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ...

ಬೆಂಗಳೂರು: ವೈರಸ್ ಇಲ್ಲದವರು ರಾಜ್ಯ ಪ್ರವೇಶಿಸಬಹುದು ಎಂದು ಒಡಿಶಾ ರಾಜ್ಯ ಸರ್ಕಾರ ಶುಕ್ರವಾರ ಹೇಳಿದೆ. 

ರಾಜ್ಯ ಸರ್ಕಾರ ಹಾಗೂ ನೈಋತ್ಯ ರೈಲ್ವೇ ಸಹಯೋಗದಲ್ಲಿ ಲಾಕ್'ಡೌನ್ ನಿಂದ ರಾಜಧಾನಿಯಲ್ಲಿ ಸಿಲುಕಿಕೊಂಡಿದ್ದ ಹೊರರಾಜ್ಯದ ಸಾವಿರಾರು ವಲಸೆ ಕಾರ್ಮಿಕರನ್ನು ಅವರವರ ರಾಜ್ಯಗಳಿಗೆ ಕಳುಹಿಸಲು ಸಿದ್ಧತೆ ನಡೆಸುತ್ತಿದೆ. ಈ ನಡುವಲ್ಲೇ ಒಡಿಶಾದ ನ್ಯಾಯಾಲಯದ ಆದೇಶ ಹೊರಡಿಸಿದ್ದು, ವೈರಸ್ ಇಲ್ಲವೆಂದು ಪ್ರಮಾಣಪತ್ರ ಸಲ್ಲಿಸಿದವರಿಗಷ್ಟೇ ರಾಜ್ಯ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ ಎಂದು ಹೇಳಿದೆ. 

ಪ್ರಸ್ತುತ ರಾಜ್ಯದಲ್ಲಿ 19,000 ವಲಸೆ ಕಾರ್ಮಿಕರಿದ್ದು, ಎಲ್ಲರನ್ನು ಅವರವರ ರಾಜ್ಯಗಳಿಗೆ ಕಳುಹಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಮೇ.3 ರಂದು ಚಿಕ್ಕಬಾಣಾವರದಿಂದ ಭುವನೇಶ್ವರಕ್ಕೆ ಮೊದಲ ರೈಲು ಪ್ರಯಾಣ ಬೆಳೆಸಿದೆ. ನಿಲ್ದಾಣಕ್ಕೆ ಬರುವ ಎಲ್ಲಾ ಕಾರ್ಮಿಕರನ್ನು ಪರೀಕ್ಷೆಗೊಳಪಡಿಸಿ, ಪರೀಕ್ಷೆಯಲ್ಲಿ ವೈರಸ್ ಪತ್ತೆಯಾಗದವರನ್ನು ಮಾತ್ರ ರಾಜ್ಯದೊಳಗೆ ಪ್ರವೇಶಿಸಲು ಅನುಮತಿ ನೀಡಿ ಎಂದು ಒಳಿಶಾ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಲಕ್ಷಣ ಇಲ್ಲದವರನ್ನು ಕ್ವಾರಂಟೈನ್ ನಲ್ಲಿರಿಸಲು ಹಾಗೂ ಗಂಭೀರ ಪರಿಸ್ಥಿತಿಯಲ್ಲಿರುವವರ ಮೇಲೆ ಗಮನ ಹರಿಸಲು ಸೂಚಿಸಿದೆ ಎಂದು ತಿಳಿದುಬಂದಿದೆ. 

ಮೇ.3ರಿಂದ ನಗರದಿಂದ ಮೊದಲ ರೈಲು ಸಂಜೆ 4.25ಕ್ಕೆ ಚಿಕ್ಕಬಾಣಾವರದಿಂದ 1,200 ಮಂದಿ ಕಾರ್ಮಿಕರನ್ನು ಹೊತ್ತು ಉತ್ತರಪ್ರದೇಶದ ಲಖನೌಗೆ ತೆರಳಿದೆ. ಎರಡನೇ ರೈಲು ಸಂಜೆ 5.45ಕ್ಕೆ ಕೋಲಾರದ ಮಾಲೂರು ರೈಲು ನಿಲ್ದಾಣದಿಂದ 1,200 ಕಾರ್ಮಿಕರನ್ನು ಹಾಗೂ ಏಳು ಮಕ್ಕಳನ್ನು ಬಿಹಾರದ ದಾನಪುರಕ್ಕೆ ಕರೆದೊಯ್ದಿದೆ. 

ಸಂಜೆ 6.55ಕ್ಕೆ ಚಿಕ್ಕಬಾಣಾವರ ರೈಲು ನಿಲ್ದಾಣದಿಂದ ಉತ್ತರಪ್ರದೇಶದ ಲಖನೌಗೆ ಹೊರಟ 3ನೇ ರೈಲಿನಲ್ಲಿ 1,988 ಮಂದಿ ಕಾರ್ಮಿಕರು ಪ್ರಯಾಣ ಬೆಳೆಸಿದ್ದಾರೆ. ಮಾಲೂರಿನಿಂದ ಜಾರ್ಖಾಂಡ್'ನ ಹಟಿಯಾಗೆ ಮತ್ತೊಂದು ರೈತರು ತೆರಳಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT