ಕೇಂದ್ರ ಸಚಿವ ಡಿ. ವಿ. ಸದಾನಂದಗೌಡ 
ರಾಜ್ಯ

ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ: ಡಿ.ವಿ. ಸದಾನಂದ ಗೌಡ

ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ ಬಿಡಲು ಏರ್ ಇಂಡಿಯಾ ಒಪ್ಪಿದ್ದು, ಕನ್ನಡಿಗರು 2 ದಿನ ಮುಂಚಿತವಾಗಿಯೇ ತಾಯ್ನಾಡಿಗೆ ಮರಳಲಿದ್ದಾರೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.

ಬೆಂಗಳೂರು: ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ ಬಿಡಲು ಏರ್ ಇಂಡಿಯಾ ಒಪ್ಪಿದ್ದು, ಕನ್ನಡಿಗರು 2 ದಿನ ಮುಂಚಿತವಾಗಿಯೇ ತಾಯ್ನಾಡಿಗೆ ಮರಳಲಿದ್ದಾರೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಫ್ಲೈಟ್‌ ನಂ-ಐಎಕ್ಸ್‌ 0384 ವಿಮಾನ ದುಬೈಯಿಂದ 16.10ಕ್ಕೆ ಹೊರಟು ಮಂಗಳೂರಿಗೆ 21.10ಕ್ಕೆ ತಲುಪಲಿದೆ ಎಂದಿದ್ದಾರೆ. 

ಲಾಕ್‌ ಡೌನ್‌ನಿಂದಾಗಿ ವಿದೇಶದಲ್ಲಿ ಉಳಿದಿರುವ ಭಾರತೀಯರನ್ನು ಭಾರತಕ್ಕೆ ಕರೆ ತರಲು ಏರ್ ಇಂಡಿಯಾ ವಿಮಾನವು ಮೇ 14 ರಂದು ಸಂಜೆ 4:10 ದುಬೈಯಿಂದ ಹೊರಡಲಿದ್ದು, ಮಂಗಳೂರಿಗೆ ರಾತ್ರಿ 9:10 ಕ್ಕೆ ಆಗಮಿಸಲಿದೆ ಎಂದು ಈ ಮೊದಲು ತಿಳಿಸಲಾಗಿತ್ತು.

 ಆದರೆ ಇದೀಗ ಎರಡು ದಿನ ಮೊದಲು ಈ ವಿಮಾನ ಹೊರಡಲಿದೆ. ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು, ಹಿರಿಯರಿಗೆ ಮೊದಲ ಆದ್ಯತೆಯನ್ನು ನೀಡಲಾಗಿದೆ. ವಿಮಾನದಲ್ಲಿ ಆಗಮಿಸಲಿರುವ ಪ್ರಯಾಣಿಕರಲ್ಲಿ ಮಂಗಳೂರಿನವರಿಗೆ ಮಂಗಳೂರಿನಲ್ಲಿಯೇ ಕ್ವಾರಂಟೈನ್ ಮಾಡಲಾಗುವುದು. ಉಳಿದಂತೆ ಉಡುಪಿ ಜಿಲ್ಲೆಯ ಹಾಗು ಕೇರಳ ಭಾಗದ ಜನರಿಗೆ ಅವರ ಭಾಗದಲ್ಲಿಯೇ ಕ್ವಾರಂಟೈನ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT