ಕೇಂದ್ರ ಸಚಿವ ಡಿ. ವಿ. ಸದಾನಂದಗೌಡ 
ರಾಜ್ಯ

ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ: ಡಿ.ವಿ. ಸದಾನಂದ ಗೌಡ

ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ ಬಿಡಲು ಏರ್ ಇಂಡಿಯಾ ಒಪ್ಪಿದ್ದು, ಕನ್ನಡಿಗರು 2 ದಿನ ಮುಂಚಿತವಾಗಿಯೇ ತಾಯ್ನಾಡಿಗೆ ಮರಳಲಿದ್ದಾರೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.

ಬೆಂಗಳೂರು: ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ ಬಿಡಲು ಏರ್ ಇಂಡಿಯಾ ಒಪ್ಪಿದ್ದು, ಕನ್ನಡಿಗರು 2 ದಿನ ಮುಂಚಿತವಾಗಿಯೇ ತಾಯ್ನಾಡಿಗೆ ಮರಳಲಿದ್ದಾರೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಫ್ಲೈಟ್‌ ನಂ-ಐಎಕ್ಸ್‌ 0384 ವಿಮಾನ ದುಬೈಯಿಂದ 16.10ಕ್ಕೆ ಹೊರಟು ಮಂಗಳೂರಿಗೆ 21.10ಕ್ಕೆ ತಲುಪಲಿದೆ ಎಂದಿದ್ದಾರೆ. 

ಲಾಕ್‌ ಡೌನ್‌ನಿಂದಾಗಿ ವಿದೇಶದಲ್ಲಿ ಉಳಿದಿರುವ ಭಾರತೀಯರನ್ನು ಭಾರತಕ್ಕೆ ಕರೆ ತರಲು ಏರ್ ಇಂಡಿಯಾ ವಿಮಾನವು ಮೇ 14 ರಂದು ಸಂಜೆ 4:10 ದುಬೈಯಿಂದ ಹೊರಡಲಿದ್ದು, ಮಂಗಳೂರಿಗೆ ರಾತ್ರಿ 9:10 ಕ್ಕೆ ಆಗಮಿಸಲಿದೆ ಎಂದು ಈ ಮೊದಲು ತಿಳಿಸಲಾಗಿತ್ತು.

 ಆದರೆ ಇದೀಗ ಎರಡು ದಿನ ಮೊದಲು ಈ ವಿಮಾನ ಹೊರಡಲಿದೆ. ವಿಮಾನದಲ್ಲಿ ಗರ್ಭಿಣಿಯರು, ಮಕ್ಕಳು, ಹಿರಿಯರಿಗೆ ಮೊದಲ ಆದ್ಯತೆಯನ್ನು ನೀಡಲಾಗಿದೆ. ವಿಮಾನದಲ್ಲಿ ಆಗಮಿಸಲಿರುವ ಪ್ರಯಾಣಿಕರಲ್ಲಿ ಮಂಗಳೂರಿನವರಿಗೆ ಮಂಗಳೂರಿನಲ್ಲಿಯೇ ಕ್ವಾರಂಟೈನ್ ಮಾಡಲಾಗುವುದು. ಉಳಿದಂತೆ ಉಡುಪಿ ಜಿಲ್ಲೆಯ ಹಾಗು ಕೇರಳ ಭಾಗದ ಜನರಿಗೆ ಅವರ ಭಾಗದಲ್ಲಿಯೇ ಕ್ವಾರಂಟೈನ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT